Breaking News

ಸಿಡಿ ಕೇಸ್‌: ಕತ್ತರಿ ಹಾಕದ ವಿಡಿಯೋ ಪತ್ತೆ

Spread the love

ಬೆಂಗಳೂರು: ಸಿಡಿ ಕೇಸ್‌ ತನಿಖೆ ಚುರುಕುಗೊಳಿಸಿರುವ ಎಸ್‌ ಐಟಿ ಅಧಿಕಾರಿಗಳಿಗೆ “ಕತ್ತರಿ ಹಾಕದ’ ಸುಮಾರು 2 ಗಂಟೆ 28 ನಿಮಿಷದ ವಿಡಿಯೋ ಸಿಕ್ಕಿದೆ ಎಂಬ ವಿಚಾರ ಬೆಳಕಿಗೆ ಬಂದಿದೆ.

ಮತ್ತೂಂದೆಡೆ ಬುಧ ವಾರ ರಾತ್ರಿ 3ನೇ ಬಾರಿಗೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವ ರನ್ನು ಎಸ್‌ ಐಟಿ ಅವರ ಮನೆಯಲ್ಲೇ ವಿಚಾರಣೆ ನಡೆಸಿದೆ. ಇತ್ತೀಚೆಗೆ ಪ್ರಕರಣದ ‌ ಕಿಂಗ್‌ ಪಿನ್‌ ಎನ್ನ ಲಾದ ಪತ್ರ ಕರ್ತ ನರೇ ಶ್‌ ಗೌ ಡನ ಮನೆ ಯಲ್ಲಿದ್ದ ಲ್ಯಾಪ್‌ ಟಾಪ್‌ ರಿಟ್ರೈವ್‌ ಮಾಡಿ ದಾಗ ಕತ್ತರಿ ಹಾಕದ ವಿಡಿಯೋ ಸಿಕ್ಕಿದೆ ಎಂದು ಮೂಲಗಳು ತಿಳಿಸಿವೆ.

ಮಾಜಿ ಸಚಿವರ ಸ್ಟಿಂಗ್‌ ಮಾಡ ಲೆಂದೆ ನಗರ ‌ದ ಎಸ್‌ಪಿ ರಸ್ತೆಯಲ್ಲಿರುವ ರಹಸ್ಯ ಕ್ಯಾಮೆ ರಾ ಖರೀದಿಸಿ ಯುವ ತಿಯ ವ್ಯಾನಿಟಿ ಬ್ಯಾಗ್‌ಗೆ ಅಳವಡಿಸಿ , ದೃಶ್ಯ ಸೆರೆಹಿಡಿದಿದ್ದರು. ಸದ್ಯ ಎಸ್‌ ಐಟಿ ಅಧಿಕಾರಿಗಳಿಗೆ ಸಿಕ್ಕಿರುವ 2ಗಂಟೆ 28 ನಿಮಷದ ವಿಡಿಯೋದಲ್ಲಿ ಮಾಜಿ ಸಚಿವರು‌ ಹೋಟೆಲ್‌ಗೆ ಬರುವುದು, ಕಾರು ಹತ್ತುವುದು, ಆಕೆಯ ಕೋಣೆಗೆ ಹೋಗುವುದು ಸೇರಿದಂತೆ ಪ್ರತಿ ಯೊಂದು ದೃಶ್ಯವು ಸೆರೆಯಾಗಿದೆ. ಆರೋಪಿಗಳು ಮಾಜಿ ಸಚಿವರು ಬರುವ ಒಂದೆರಡು ನಿಮಿಷ ಮೊದಲೇ ರಹಸ್ಯ ಕ್ಯಾಮೆರಾ ಆನ್‌ ಮಾಡಿದ್ದರು ಎಂದು ಮೂಲಗಳು ತಿಳಿಸಿವೆ.

ರಮೇಶ್‌ ಜಾರಕಿಹೊಳಿ ವಿಚಾರಣೆ:

ರಮೇಶ್‌ ಜಾರಕಿಹೊಳಿ ಅವರ ಸದಾಶಿವನಗರದಲ್ಲಿರುವ ನಿವಾಸಕ್ಕೆ ಬುಧವಾರ ಸಂಜೆ ಭೇಟಿ ನೀಡಿದ ಎಸ್‌ಐಟಿ ಅಧಿಕಾರಿಗಳ ತಂಡ ಸಂಜೆ 6.30 ರಿಂದ ರಾತ್ರಿ 9.30ರವರೆಗೆ ವಿಚಾರಣೆ ನಡೆಸಿದೆ. ಎಸಿಪಿ ಧರ್ಮೇಂದ್ರ ಕುಮಾ ರ್‌ ನೇತೃತ್ವದಲ್ಲಿ ನಡೆದ ವಿಚಾರಣೆ ವೇಳೆ ಮಾಜಿ ಸಚಿವರ ಮೊಬೈಲ್ ಜಪ್ತಿ ಮಾಡಲಾಗಿತ್ತು. ಆದರೆ, ಜಾರಕಿಹೊಳಿ ಮೊಬೈಲ್‌ನಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ಮಾಹಿತಿ ಸಿಕ್ಕಿಲ್ಲ. ಮೊಬೈಲ್ ಫಾರ್ಮಾಟ್‌ ಮಾಡಿದ ಹಿನ್ನೆಲೆಯಲ್ಲಿಪರಿಶೀಲನೆ ವೇಳೆ ಮೊಬೈಲ್‌ನಲ್ಲಿ ಯಾವುದೇ ಡೇಟಾ ಸಿಕ್ಕಿಲ್ಲ. ಇದೀಗ ಮೊಬೈಲ್‌ನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿರುವ ಎಸ್‌ಐಟಿ ರಿಟ್ರೀವ್‌ ಮಾಡಲು ಮುಂದಾಗಿದೆ.

ಹಲವು ಅನುಮಾನಗಳು: ಈ ಹಿಂದೆ ಬಿಡುಗಡೆಯಾದ ವಿಡಿಯೋದಲ್ಲಿ ಯುವತಿಯ ಮುಖ ಚಹರೆ ಸಂಪೂರ್ಣವಾಗಿ ಕಾಣುತ್ತಿತ್ತು. ಆದರೆ, ಗುರುವಾರ ಬಿಡುಗಡೆ ಯಾಗಿರುವ ಎರಡನೇ ವಿಡಿಯೊದಲ್ಲಿ ಯುವ ತಯ ಮುಖ ಭಾಗಶಃ ಮುಸುಕಾಗಿದೆ. ಅಲ್ಲದೆ, ಆಕೆಯ ಮಾತ ನಾ ಡುವ ಸಂದರ್ಭದಲ್ಲಿ ಮಕ್ಕಳು ಅಳುವ ಮತ್ತು ಆಟ ವಾಡುತ್ತಿರುವ ಹಿನ್ನೆಲೆ ಧ್ವನಿ ಕೇಳಿ ಬರುತ್ತಿದೆ. ಹೀಗಾಗಿ ಯುವತಿ ರಾಜ್ಯ ಅಥವಾ ಹೊರ ರಾಜ್ಯ ದಲ್ಲೇ ಸಂಬಂಧಿ ಅಥವಾ ಸ್ನೇಹಿತರ ಮನೆಯಲ್ಲಿ ಅಡ ಗಿ ಕೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ಬಿಡುಗಡೆಯಾದ‌ ವಿಡಿಯೋ ಎಡಿಟ್‌ ಆಗಿರುವ ವಿಡಿಯೋ ಆಗಿದೆ ಎಂದು ಎಸ್‌ ಐಟಿ ಮೂಲಗಳು ತಿಳಿಸಿವೆ.

ಎಸ್‌ ಐಟಿ ಸಂವಹನ ಕೊರತೆ? :

ಸಣ್ಣ ಸಾಕ್ಷ್ಯವಿಲ್ಲದ ಪತ್ರ ಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣ ಭೇದಿಸಿದ ವಿಶೇಷ ತನಿಖಾ ತಂಡದ ತನಿಖಾಧಿಕಾರಿ ಎಂ.ಎ ನ್‌. ಅನುಚೇತ್‌ ಸೇರಿ ಶೇ.85 ಅಧಿಕಾರಿಗಳು ಸಿಡಿ ಪ್ರಕರಣದ ಎಸ್‌ ಐಟಿಯಲ್ಲಿದ್ದಾರೆ. ಆದರೂ ಸಿಡಿ ಪ್ರಕರಣಕ್ಕೆ ಸಂಬಂಧಿಸಿದ ಶಂಕಿತರನ್ನು ಪತ್ತೆ ಹಚ್ಚಲು ಸಾಧ್ಯ ವಾಗುತ್ತಿಲ್ಲ. ಈಗಾಗಲೇ ಸಿಡಿ ಯುವತಿ ಎರಡು ಹೇಳಿಕೆ ವಿಡಿಯೋ ಬಿಡುಗಡೆ ಮಾಡಿದ್ದು, ಕಿಂಗ್‌ ಪಿನ್‌ ಎನ್ನಲಾದ ಪತ್ರ ಕರ್ತ ನರೇಶ್‌ ಗೌಡ ಕೂಡ ಒಂದು ಹೇಳಿಕೆ ವಿಡಿಯೋ ಬಿಡು ಗಡೆ ಮಾಡಿ ಎಸ್‌ಐಟಿಗೆ ಸವಾಲು ಎಸೆದಿದ್ದರು. ಆದರೂ ಅವರು ಅಡಗಿಕೊಂಡಿರುವ ಸ್ಥಳ ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲ. ಎಸ್‌ ಐ ಟಿಗೆ ಸರ್ಕಾರದ ಕೆಲ ನಾಯಕರ ಒತ್ತಡ ಇದೆಯೇ? ಅಥವಾ ಎಸ್‌ ಐಟಿಯ ಹಿರಿಯ ಅಧಿಕಾರಿಗಳ ನಡುವೆಯೇ ಸಂವಹನದ ಕೊರತೆಯಿಂದಾಗಿ ಸಿಡಿ ಪ್ರಕರಣ ತನಿಖಾ ದಿಕ್ಕು ತಪ್ಪುತ್ತಿದೆಯೇ ಎಂಬ ಅನುಮಾನ ಶುರುವಾಗಿದೆ.

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಹೇಳಬೇಕಾದದ್ದು ಸದನದಲ್ಲೇ ಹೇಳಿದ್ದೇನೆ. ಯುವತಿಗೆ ರಕ್ಷಣೆ ನೀಡುವುದು, ದೌರ್ಜನ್ಯ ಆಗದಂತೆ ನೋಡಿಕೊಳ್ಳುವುದು ಸರ್ಕಾರದ ಕರ್ತವ್ಯ. – ಡಿ.ಕೆ. ಶಿವಕುಮಾರ್‌, ಕೆಪಿಸಿಸಿ ಅಧ್ಯಕ್ಷ


Spread the love

About Laxminews 24x7

Check Also

ಹಾಸನ ಜನರ ಹೃದಯ ಹಿಂಡುತ್ತಿರುವ ಹೃದಯಾಘಾತ: ಕೊನೆಗೂ ಎಚ್ಚೆತ್ತ ಜಿಲ್ಲಾಡಳಿತ

Spread the loveಹಾಸನ, ಜೂನ್​ 30: ಹಾಸನ (Hassan) ಜಿಲ್ಲೆಯಲ್ಲಿ ಹೃದಯಘಾತದಿಂದ (Heart Attack) ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಹಾಸನ ಜಿಲ್ಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ