ಬೆಂಗಳೂರು ; ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಿಡಿ ಲೇಡಿ ಇಂದು ಮೂರನೇ ವಿಡಿಯೋ ಬಿಡುಗಡೆ ಮಾಡಿದ್ದು, ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡುತ್ತೇನೆ ಎಂದು ಹೇಳಿದ್ದಾಳೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಯುವತಿ ಕಾನೂನಾತ್ಮಕವಾಗಿ ದೂರು ಕೊಡಲಿ, ಯುವತಿಗೆ ಭದ್ರತೆ ಕೊಡಲು ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದು ಹೇಳಿದ್ದಾರೆ.
ಯುವತಿ ಕಾನೂನಾತ್ಮಕವಾಗಿ ದೂರು ಕೊಡಲಿ, ಯುವತಿಗೆ, ತಂದೆ ತಾಯಿಗೆ ಭದ್ರತೆ ನೀಡುವ ಸೀಡುವ ಸಂಬಂಧ ಸೂಕ್ತ ಕ್ರಮಕೈಗೊಳ್ಳಾಗುತ್ತದೆ.ಕಾನೂನು ಪ್ರಕಾರ ಏನು ಕ್ರಮ ಇದೆಯೋ ಅದಾಗುತ್ತದೆ ಎಂದರು.