Breaking News

ಬೆಳಗಾವಿ ಲೋಕಸಭಾ ಉಪ ಚುನಾವಣೆ: ಲಿಂಗಾಯತ ಸಮಾಜದ ಬೆಂಬಲ ಕೋರಿದ ಮಂಗಲಾ ಅಂಗಡಿ

Spread the love

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರು, ನಗರದಲ್ಲಿ ಲಿಂಗಾಯತ ಸಂಘಟನೆ ಸದಸ್ಯರೊಂದಿಗೆ ಭಾನುವಾರ ಸಭೆ ನಡೆಸಿದರು.

‘ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಉಪ ಚುನಾವಣೆಯಲ್ಲಿ ಸಮುದಾಯದ ಸಂಪೂರ್ಣ ಬೆಂಬಲ ಹಾಗೂ ಸಹಕಾರವನ್ನು ನನಗೆ ನೀಡಬೇಕು’ ಎಂದು ಕೋರಿದರು.

‘ಪತಿಯಾಗಿದ್ದ ದಿವಂಗತ ಸುರೇಶ ಅಂಗಡಿ ಅವರು ಹತ್ತು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಅವುಗಳನ್ನು ಪೂರ್ಣಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಲು ಅವಕಾಶ ಕಲ್ಪಿಸಬೇಕು’ ಎಂದು ಮನವಿ ಮಾಡಿದರು.

ಸಂಘಟನೆಯ ಅಧ್ಯಕ್ಷ ಈರಣ್ಣ ದಾಯಣ್ಣನವರ, ಉಪಾಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ, ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ, ಬೆಳಗಾವಿ ನಗರಾಭಿವೃದ್ಧಿ ‍ಪ್ರಾಧಿಕಾರದ ಅಧ್ಯಕ್ಷ ಘೂಳಪ್ಪ ಹೊಸಮನಿ, ಮುಖಂಡರಾದ ಸಂಗಪ್ಪ ಬ್ಯಾಳಿ, ಸುರೇಶ ನರಗುಂದ, ಶಶಿಭೂಷಣ ಪಾಟೀಲ, ರಮೇಶ್ ಟಿ., ಗಜೇಂದ್ರ ಶೇಡಬಾಳ, ಶಶಿ ಪಾಟೀಲ, ಸದಾಶಿವ ದೇವರಮನಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ