ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪರವಾಗಿ ಪ್ರಚಾರಕ್ಕೆ ಬೆಳಗಾವಿಗೆ ತೆರಳಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ ಬೆಂಬಲಿಗರು ಘೋಷಣೆ ಕೂಗಿದರು. ಈ ವೇಳೆ ಡಿಕೆಶಿ ಬೆಂಬಲಿಗರ ಕಾರಿಗೆ ಚಪ್ಪಲಿಯನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದರು.
ಬೆಳಗಾವಿ ವಿಮಾನ ನಿಲ್ದಾಣದ ಬಳಿ ಕಾರಿನಲ್ಲಿ ಡಿಕೆಶಿ ತೆರಳುತ್ತಿದ್ದಾಗ ರಸ್ತೆಯುದ್ದಕ್ಕೂ ನಿಂತಿದ್ದ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸಿದರು. ʻಗೋ ಬ್ಯಾಕ್ ಡಿಕೆಶಿʼ ಎಂದು ಕೂಗಿ, ಕಾರಿಗೆ ಕಪ್ಪು ಬಾವುಟ ಪ್ರದರ್ಶಿಸಿದರು. ಡಿಕೆಶಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.