ಬೆಳಗಾವಿ : ಬೆಳಗಾವಿ ಲೋಕಸಭೆ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಿದ್ದಾರೆ.
ನಗರದ ಆರ್ ಟಿಒ ನಗರದಲ್ಲಿರುವ ಕಾಂಗ್ರೆಸ್ ಭವನದಿಂದ ಮೂರು ವಾಹನಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಸತೀಶ್ ಜಾರಕಿಹೊಳಿ ಹಸಿರು ಶಾಲು ಧರಿಸಿ ನಾಮಪತ್ರ ಸಲ್ಲಿಸಿದ್ದಾರೆ. ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸಾಥ್ ನೀಡಿದರು.
ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಉಪ ಚುನಾವಣೆ ಗೆಲ್ಲಲು ತಂತ್ರಗಳನ್ನು ರೂಪಿಸುತ್ತಿವೆ. ಚುನಾವಣಾ ಕಣದಲ್ಲಿ ಎರಡೂ ಪಕ್ಷಗಳ ಪ್ರಾಬಲ್ಯ ಕಾಣುತ್ತಿದ್ದು, ನೇರ ಪೈಪೋಟಿ ನಿರೀಕ್ಷೆ ಮಾಡಲಾಗಿದೆ.
Laxmi News 24×7