ಬೆಳಗಾವಿ: ರಾಜಕೀಯದವರ ಸಂಗ ಮಾಡಬೇಡ ಅಂತ ಅವಳಿಗೆ ಹೇಳಿದ್ದೆ ಆದ್ರೆ ಅವಳು ಕೇಳಲಿಲ್ಲ ಎಂದು ಸಿಡಿ ಸಂತ್ರಸ್ತೆಯ ತಾಯಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿರುವ ಸಂತ್ರಸ್ತೆಯ ತಾಯಿ, ಬಾರಮ್ಮ ಮನೆಗೆ ಮದುವೆ ಮಾಡ್ತೀವಿ, ರಾಜಕೀಯದವರ ಸಂಗ ಮಾಡಬೇಡ. ಯಾವತ್ತಿದ್ರೂ ಅಪಾಯ ಎಂದು ಅವಳಿಗೆ ಬುದ್ದಿ ಹೇಳಿದ್ದೆ ಆದ್ರ ನನ್ನ ಮಾತನ್ನು ಅವಳು ಕೇಳಲಿಲ್ಲ.
ನಿನಗೆ 40 ಸಾವಿರ ರೂ. ಸಂಬಳ ಇದೆ ಸರ್ಕಾರಿ ಕೆಲಸ ಯಾಕೆ ಬೇಕು ಎಂದು ಬುದ್ದಿ ಹೇಳಿದ್ದೆವು ಆದ್ರೂ ಅವಳು ಕೇಳಲಿಲ್ಲ ಎಂದು ಆಕೆ ತಾಯಿ ಕಣ್ಣೀರಾಗಿದ್ದಾರೆ.
ಡಿಕೆ ಶಿವಕುಮಾರ್ ಅವರ ಕಡೆಯವರು ಎಲ್ಲೂ ಹೋಗಲು ಬಿಡುತ್ತಿಲ್ಲ ಎಂದು ಮಾರ್ಚ್.2ನೇ ತಾರೀಖು ಕರೆ ಮಾಡಿದಾಗ ಅಕ್ಕ ಹೇಳಿದ್ದಳು ಎಂದು ಆಕೆಯ ಸಹೋದರ ಹೇಳಿದ್ದಾನೆ.
Laxmi News 24×7