Breaking News
Home / ರಾಜ್ಯ / ಸಾರಿಗೆ ನೌಕರರ ಮುಷ್ಕರಕ್ಕೆ ರಾಜ್ಯ ಸರ್ಕಾರ ಸೆಡ್ಡು, ಖಾಸಗಿ ಬಸ್‌ಗಳಿಗೆ ಅವಕಾಶ

ಸಾರಿಗೆ ನೌಕರರ ಮುಷ್ಕರಕ್ಕೆ ರಾಜ್ಯ ಸರ್ಕಾರ ಸೆಡ್ಡು, ಖಾಸಗಿ ಬಸ್‌ಗಳಿಗೆ ಅವಕಾಶ

Spread the love

ಬೆಂಗಳೂರು, ಮಾರ್ಚ್ 30: ವಿವಿಧ ಬೇಡಿಕೆಗಳನ್ನು ಇರಿಸಿಕೊಂಡು ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿರುವ ಹಿನ್ನೆಲೆಯಲ್ಲಿ ಖಾಸಗಿ ಬಸ್‌ ಆಪರೇಟರ್‌ಗಳನ್ನು ಮುಂದಿರಿಕೊಂಡು ಟಕ್ಕರ್ ನೀಡಲು ಸರ್ಕಾರ ಮುಂದಾಗಿದೆ.

ಏಪ್ರಿಲ್ 7 ರಂದು ಸರ್ಕಾರಿ ಬಸ್ ನೌಕರರು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರಿ ಖಾಸಗಿ ಬಸ್‌ಗಳ ಜತೆ ಕೈಜೋಡಿಸಲು ಸಿದ್ಧವಾಗಿದೆ. ರಾಜ್ಯದಲ್ಲಿ 10 ಸಾವಿರ ಖಾಸಗಿ ಬಸ್ ಹಾಗೂ 1 ಲಕ್ಷ ಟ್ಯಾಕ್ಸಿಗಳಿದ್ದು, ಒಂದೊಮ್ಮೆ ಬಸ್‌ಗಳನ್ನು ನಿಲ್ಲಿಸಿದ್ದೇ ಆದಲ್ಲಿ ಈ ಖಾಸಗಿ ಬಸ್‌ಗಳು ಸಂಚರಿಸಲಿವೆ ಎಂದು ಹೇಳುವ ಮೂಲಕ ಸಾರಿಗೆ ನೌಕರರಿಗೆ ಶಾಕ್ ನೀಡಿದೆ.

ಸಾರಿಗೆ ಆಯುಕ್ತ ಒಂದು ದಿನದ ಹಿಂದಷ್ಟೇ ಖಾಸಗಿ ಬಸ್‌ಗಳ ಮಾಲೀಕರ ಸಭೆ ಕರೆದಿದ್ದರು. ಒಂದು ತಿಂಗಳುಗಳ ಕಾಲ ನಗರದೊಳಗೆ ಬಸ್‌ಗಳನ್ನು ಓಡಿಸಲು ಖಾಸಗಿ ಬಸ್‌ಗಳಿಗೆ ಅವಕಾಶ ನೀಡಲಾಗುವುದು ಎಂದು ಹೇಳಲಾಗಿದೆ.

ಸಾರಿಗೆ ನೌಕರರ ಸಂಬಳಕ್ಕಾಗಿ 1700 ಕೋಟಿ ವ್ಯಯಿಸುತ್ತಿದ್ದೇವೆ, ಅವರ ಕೆಲವು ಬೇಡಿಕೆಗಳನ್ನು ಈಡೇರಿಸುವುದಾಗಿ ಕೂಡ ತಿಳಿಸಿದ್ದೇವೆ. ಆದರೂ ಮುಷ್ಕರ ಹಮ್ಮಿಕೊಳ್ಳುತ್ತಿರುವುದು ಬೇಸರ ಉಂಟು ಮಾಡಿದೆ ನಮ್ಮ ಬಳಿಯೂ ಖಾಸಗಿ ಬಸ್‌ಗಳಿಗೆ ಅನುಮತಿ ನೀಡುವುದಲ್ಲದೆ ಬೇರೆ ದಾರಿ ಇಲ್ಲ ಎಂದು ಸಾರಿಗೆ ಅಧಿಕಾರಿಗಳು ಹೇಳಿದ್ದಾರೆ.

ಯಾರೇ ಒಪ್ಪಿದರೂ, ಒಪ್ಪದೇ ಇದ್ದರೂ ಇದು ಜಾರಿಗೆ ಬರಲಿದೆ. ಮುಷ್ಕರದ ಸಮಯದಲ್ಲಿ ಖಾಸಗಿ ಬಸ್‌ಗಳು ಸಂಚಾರ ನಡೆಸಲಿವೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ