ಬೆಂಗಳೂರು: ಯುವತಿ ಹಾಜರುಪಡಿಸುವ ವಿಚಾರದಲ್ಲಿ ನ್ಯಾಯಾಲಯದ ಕಾನೂನು ಪ್ರಕ್ರಿಯೆ ಮುಗಿದ ಬಳಿಕ ಯುವತಿ ಹಾಜರು ಪಡಿಸಲಾಗುವುದು ಎಂದು ಯುವತಿ ಪರ ವಕೀಲ ಕೆ.ಎನ್.ಜಗದೀಶ್ ತಿಳಿಸಿದ್ದಾರೆ. ತಮ್ಮ ನಿವಾಸದ ಎದುರು ಮಾಧ್ಯಮಗಳೊಂದಿಗೆ ಮಾತನಾಡಿದ ಜಗದೀಶ್,
ಸಂತ್ರಸ್ತ ಯುವತಿ ಕೋರ್ಟ್ ಮುಂದೆ ಹಾಜರಾಗಿ ಸಿಆರ್ಪಿಸಿ 164 ರಡಿ ಹೇಳಿಕೆ ದಾಖಲಿಸಿಕೊಳ್ಳಲು ನ್ಯಾಯಾಲಯ ಈಗಾಗಲೇ ಅನುಮತಿ ನೀಡಿದೆ. ಆದರೆ, ಎಲ್ಲಿ ಮತ್ತು ಯಾವ ಸಮಯದಲ್ಲಿ ಹಾಜರುಪಡಿಸಬೇಕು ಎಂದು ಸ್ಪಷ್ಟವಾಗಿ ತಿಳಿಸಿರಲಿಲ್ಲ. ಹೀಗಾಗಿ ಕೋರ್ಟ್ಗೆ ತೆರಳುವುದಾಗಿ ತಿಳಿಸಿದ್ದಾರೆ.
ಯುವತಿ ಹಾಜರುಪಡಿಸುವ ಸಂಬಂಧ ನ್ಯಾಯಾಲಯದಲ್ಲಿ ಈ ಬಗ್ಗೆ ಚರ್ಚಿಸಿದ ಬಳಿಕ ನ್ಯಾಯಾಧೀಶರಿಂದ ಅನುಮತಿ ಪಡೆಯಲಾಗುವುದು. ಯುವತಿ ಹಾಜರುಪಡಿಸಿ ಎಸ್ಐಟಿ ತನಿಖಾಧಿಕಾರಿಗಳಿಗೂ ಈ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.