Breaking News

D ಪ್ರಕರಣ ಬೆಳಗಾವಿಯಲ್ಲಿB.S.Y.ಹೇಳಿದ್ದೇನು…?

Spread the love

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಸರಿಯಾಗಿ ನಡೆಯುತ್ತಿಲ್ಲ ಎಂಬುದರಲ್ಲಿ ಸತ್ಯಾಂಶವಿಲ್ಲ ನೂರಕ್ಕೆ ನೂರರಷ್ಟು ಕಾನೂನು ಚೌಕಟ್ಟಿನಲ್ಲಿ ತನಿಖೆ ನಡೆಯುತ್ತಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಲೋಕಸಭಾ ಉಪಚುನಾವಣೆ ಹಿನ್ನೆಲೆಯಯಲ್ಲಿ ಬೆಳಗಾವಿಗೆ ಆಗಮಿಸಿರುವ ಸಿಎಂ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಮೌನವಾಗಿಲ್ಲ. ಪ್ರತಿ ಕ್ಷಣದ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದೇನೆ. ಗೃಹ ಸಚಿವರು ಸಿಡಿ ಪ್ರಕರಣದ ಜವಾಬ್ದಾರಿ ಪಡೆದು ಕೆಲಸ ಮಾಡುತ್ತಿದ್ದಾರೆ ಎಂದರು.

ಸುಮ್ಮನೇ ಹೇಳಿಕೆ ನೀಡುವುದರಿಂದ ಯಾವುದೇ ಪ್ರಯೋಜನವಾಗಲ್ಲ. ತನಿಖೆ ಸರಿಯಾಗಿ ಆಗುತ್ತಿಲ್ಲ ಎಂಬುದರಲ್ಲಿ ಸತ್ಯಾಂಶವಿಲ್ಲ. ನೂರಕ್ಕೆ ನೂರರಷ್ಟು ಕಾನೂನು ಚೌಕಟ್ಟಿನಲ್ಲಿ ತನಿಖೆ ಸಮರ್ಪಕವಾಗಿ ನಡೆಯುತ್ತಿದೆ.ಈ ಬಗ್ಗೆ ಯಾವುದೇ ಅನುಮಾನಗಳು ಬೇಡ ಎಂದು ಹೇಳಿದರು.


Spread the love

About Laxminews 24x7

Check Also

ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ

Spread the loveಬೆಳಗಾವಿ : ಟಿಳಕವಾಡಿಯ ಕರ್ನಾಟಕ ಲಾ ಸೊಸೈಟಿಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ಮಾ.13ರಿಂದ 15ರವರೆಗೆ 16ನೇ ಸರಣಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ