Breaking News

ಮುಂದಿನ ಕಾನೂನು ಹೋರಾಟಕ್ಕೆ ಹಿರಿಯ ವಕೀಲರ ಜೊತೆ ಬಾಲಚಂದ್ರ ಜಾರಕಿಹೊಳಿ ಚರ್ಚೆ

Spread the love

ಬೆಂಗಳೂರು: ಸಿಡಿ ಲೇಡಿ ಇಂದು ನ್ಯಾಯಾಧೀಶರ ಮುಂದೆ ಹಾಜರಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಹೇಗೆ ನಡೆಸಬೇಕು ಎಂಬುದನ್ನು ತಿಳಿಯಲು ಸೋಮವಾರ ರಾತ್ರಿ ಬಾಲಚಂದ್ರ ಜಾರಕಿಹೊಳಿ ಹಿರಿಯ ವಕೀಲರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ನ್ಯಾಯಾಧೀಶರ ಮುಂದೆ ಹೇಳಿಕೆ ಕೊಟ್ಟರೆ ರಮೇಶ್‌ ಜಾರಕಿಹೊಳಿಗೆ ಸಂಕಷ್ಟ ಗ್ಯಾರಂಟಿ. ಆಕೆಯ ಹೇಳಿಕೆ ವಿಡಿಯೋ ಹೇಳಿಕೆಗೆ ತದ್ವಿರುದ್ಧವಾಗಿ ಇದ್ರೆ ಮಾತ್ರ ಈ ಪ್ರಕರಣದಲ್ಲಿ ಪಾರು. ಇಲ್ಲದಿದ್ದರೆ ರಮೇಶ್ ಜಾರಕಿಹೊಳಿಗೆ ಸಂಕಷ್ಟ ಆಗಲಿದೆ ಎಂದು ಹಿರಿಯ ವಕೀಲರು ಹೇಳಿದ್ದಾರೆ.

ಆಕೆ ನ್ಯಾಯಾಲಯದ ಮುಂದೆ ಬಂದಾಗ ಎಸ್ಐಟಿ ವಶಕ್ಕೆ ಕೊಡುವಂತೆ ಸರ್ಕಾರಿ ಪರ ವಕೀಲರು ಕೇಳಿದರೆ ಮಾತ್ರ ನಿಮಗೂ ಕೇಸ್ ವಿಚಾರದಲ್ಲಿ ಅಭಿಪ್ರಾಯ ಮಂಡಿಸಲು ಅವಕಾಶ ಇರಲಿದೆ ಎಂದು ವಕೀಲರು ಸಲಹೆ ನೀಡಿದ್ದಾರೆ.

ಒಂದೊಮ್ಮೆ ಇವತ್ತು ಯುವತಿ‌ ಸ್ವಯಿಚ್ಚೆ ಹೇಳಿಕೆಗೆ ಹಾಜರಾಗದಿದ್ದರೆ ಪೋಷಕರು ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಹಾಕುವ ಸಾಧ್ಯತೆಯಿದೆ. ಯುವತಿ ಪತ್ತೆಯಾಗಿ ಪೋಷಕರ ವಶಕ್ಕೆ ನ್ಯಾಯಾಲಯ ನೀಡಿದರೆ ಮುಂದಿನ ಕಾನೂನು ಅವಕಾಶಗಳ ಬಗ್ಗೆಯೂ ಚರ್ಚೆ ನಡೆದಿದೆ.

ಜಾರಕಿಹೊಳಿ ಮುಂದಿನ ನಡೆ ಏನು?
ದೂರಿನಂತೆ ಯುವತಿ ಹೇಳಿಕೆ ನೀಡಿದರೆ ಜಾರಕಿಹೊಳಿ ಬಂಧನ ಮಾಡುವ ಸಾಧ್ಯತೆಯಿದೆ. ಹೀಗಾಗಿ ಯುವತಿ ಇವರ ವಿರುದ್ಧ ಹೇಳಿಕೆ ಕೊಟ್ಟ ತಕ್ಷಣವೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಬಹುದು. ಬಳಿಕ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ನ್ನು ರದ್ದು ಮಾಡುವ ಬಗ್ಗೆ ಅರ್ಜಿ ಸಲ್ಲಿಸಬಹುದು.


Spread the love

About Laxminews 24x7

Check Also

ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 ಗಂಟೆ ಉಚಿತ ವಿದ್ಯುತ್! ಅರ್ಜಿ ಸಲ್ಲಿಕೆ ಹೇಗೆ?

Spread the love ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ