ಬೆಳಗಾವಿ :ಇಂದು ಬೆಳಗಾವಿಯಲ್ಲಿ, ಲೋಕಸಭಾ ಉಪಚುನಾವಣೆ ನಿಮಿತ್ತ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ಜಿ, ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಜಿ, ಅವರ ಮುಖ್ಯ ಉಪಸ್ಥಿತಿಯಲ್ಲಿ, ನಮ್ಮ ಪಕ್ಷದ ಅಭ್ಯರ್ಥಿ ಶ್ರೀಮತಿ ಮಂಗಲಾ ಸುರೇಶ್ ಅಂಗಡಿ ಅವರ ಪರವಾಗಿ ನಡೆದ ಪ್ರಚಾರ ಸಮಾವೇಶದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭಾಗವಹಿಸಿದರು.
ಬೆಳಗಾವಿ ಕ್ಷೇತ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ದ ಜನನಾಯಕ, ಕೇಂದ್ರದ ಮಾಜಿ ಸಚಿವರಾದ ದಿವಂಗತ ಶ್ರೀ ಸುರೇಶ್ ಜಿ, ಅಂಗಡಿಯವರ ಜನಪರ ಕಾರ್ಯ ಎಂದೆಂದಿಗೂ ಅಮರ. ಅದೇ ಹಾದಿಯಲ್ಲಿ ಶ್ರೀಮತಿ ಮಂಗಲಾ ಅಂಗಡಿಯವರು ಹೆಜ್ಜೆ ಇಡಲಿದ್ದು, ಅವರಿಗೆ ನಿಮ್ಮೆಲ್ಲರ ಪ್ರೀತಿ, ಸಹಕಾರ, ಆಶೀರ್ವಾದ ಮುಖ್ಯ. ಈ ಬಾರಿಯ ಉಪ ಚುನಾವಣೆಯಲ್ಲೂ ಸರ್ವ್ ಮತಬಾಂಧವರು ಬಿಜೆಪಿ ಪಕ್ಷಕ್ಕೆ ಮತ ನೀಡುವ ಮೂಲಕ ಮಗದೊಮ್ಮೆ ಹರಸಿಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಜಿ, ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಕಾರಜೋಳ ಜಿ, ರಾಜ್ಯ ಸಚಿವರಾದ ಶ್ರೀ ಜಗದೀಶ ಶೆಟ್ಟರ್ ಜಿ, ಶ್ರೀ ಕೆ.ಎಸ್.ಈಶ್ವರಪ್ಪ ಜಿ, ಶ್ರೀ ಉಮೇಶ ಕತ್ತಿ ಜಿ, ಶ್ರೀ ಶ್ರೀಮಂತ ಪಾಟೀಲ್ ಜಿ, ವಿಧಾನಸಭೆ ಉಪಸಭಾಪತಿಗಳಾದ ಶ್ರೀ ಆನಂದ ಮಾಮನಿ ಜಿ, ರಾಜ್ಯಸಭೆ ಸದಸ್ಯರಾದ ಶ್ರೀ ಈರಣ್ಣ ಕಡಾಡಿ ಜಿ, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಶ್ರೀ ಮಹಾಂತೇಶ್ ಕವಟಗಿಮಠ ಜಿ, ಶಾಸಕರು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು.