Breaking News
Home / Uncategorized / ಮುನಿಸು ಬಿಟ್ಟು ಒಗ್ಗಟ್ಟು ಪ್ರದರ್ಶಿಸಿದ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್..!

ಮುನಿಸು ಬಿಟ್ಟು ಒಗ್ಗಟ್ಟು ಪ್ರದರ್ಶಿಸಿದ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್..!

Spread the love

ಬೆಳಗಾವಿ/ರಾಯಚೂರು: ಲೋಕಸಭಾ ಚುನಾವಣೆಗೆ ಬೆಳಗಾವಿ ಕಾಂಗ್ರೆಸ್ಸಿನಲ್ಲಿ ಈಗ ಒಗ್ಗಟ್ಟಿನ ಪ್ರದರ್ಶನ ಆಗ್ತಿದೆ.

ಕಳೆದ ಬಾರಿ ಪಿಎಲ್‍ಡಿ ಬ್ಯಾಂಕ್ ಚುನಾವಣೆಯಲ್ಲಿ ವೈಮನಸ್ಸು ಹೊಂದಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸತೀಶ್ ಜಾರಕಿಹೊಳಿ ಈಗ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಕೆಲ ಹೊತ್ತು ಸಮಾಲೋಚನೆ ಮಾಡಿದ್ದಾರೆ. ಬಳಿಕ ಸತೀಶ್ ಜಾರಕಿಹೊಳಿ ಪರ ಲಕ್ಷ್ಮಿ ಹೆಬ್ಬಾಳ್ಕರ್ ಬೆಳಗಾವಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ರು.

ಪ್ರಚಾರ ಭಾಷಣದ ವೇಳೆಯೂ ಸತೀಶ್ ಜಾರಕಿಹೊಳಿಯರನ್ನೂ ಸೂಕ್ತ ಅಭ್ಯರ್ಥಿ ಎಂದು ಹಾಡಿ ಹೊಗಳಿದ್ದಾರೆ. ಸತೀಶ್ ಜಾರಕಹೊಳಿ ಮಾತನಾಡಿ, ಇದು ಕಾರ್ಯಕರ್ತರು ಮಾಡುವ ಚುನಾವಣೆ, ಕೇಂದ್ರ ಸರ್ಕಾರದ 7 ವರ್ಷದ ವೈಫಲ್ಯವನ್ನ ಜನರೇ ಹೇಳುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರು.

ಇತ್ತ ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ ಸಚಿವ ಶ್ರೀರಾಮುಲು ಮೀಸಲಾತಿ ನೀಡುವ ಕುರಿತ ಭರವಸೆಗಳ ಮಹಾಪೂರವನ್ನೇ ಹರಿಸಿದ್ದಾರೆ. ನಾನೇ ಸಮಾಜ ಕಲ್ಯಾಣ ಸಚಿವನಾಗಿದ್ದೇನೆ. ಪರಿಶಿಷ್ಟ ಜಾತಿಯವರಿಗೆ ಶೇ.17, ಪರಿಶಿಷ್ಟ ವರ್ಗಕ್ಕೆ ಶೇ 7.5, ಮೀಸಲಾತಿ, ಲಿಂಗಾಯತರನ್ನ 2 ಎಗೆ, ಕುರುಬರನ್ನ ಎಸ್‍ಟಿಗೆ ಸೇರಿಸುವ ಕೆಲಸ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಒಂದು ಲೋಕಸಭೆ, ಎರಡು ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವು ನಿಶ್ಚಿತ ಅಂದ್ರು.


Spread the love

About Laxminews 24x7

Check Also

ನಿನ್ನ ಮಗನಿಂದ ಇಂಥ ಕಪ್ಪು ಚುಕ್ಕೆ ಬಂತು; ರೇವಣ್ಣ ಮೇಲೆ ಮುಗಿಬಿದ್ದ ಎಚ್‌ಡಿಡಿ, ಎಚ್‌ಡಿಕೆ

Spread the loveಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ