ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಬಗ್ಗೆ ಎಸ್ ಐ ಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇದರ ನಡುವೆ ತಮ್ಮ ಮುಂದಿನ ನಡೆ ಬಗ್ಗೆ ರಮೇಶ್ ಜಾರಕಿಹೊಳಿ ಸಹೋದರರು ಪರಸ್ಪರ ಚರ್ಚೆಯಲ್ಲಿ ತೊಡಗಲಿದ್ದಾರೆ.
ಹೌದು, ಪ್ರಕರಣದ ಸಂಬಂಧ ತಮ್ಮ ಮುಂದಿನ ನಡೆಯ ಬಗ್ಗೆ ರಮೇಶ್ ಜಾರಕಿಹೊಳಿ ಸಹೋದರರಾದ ಬಾಲಚಂದ್ರ ಜಾರಕಿಹೊಳಿ, ಲಖನೌ ಜಾರಕಿಹೊಳಿ ಮಾತುಕತೆ ನಡೆಸಲಿದ್ದು, ರಮೇಶ್ ಭೇಟಿಗೆ ಸಹೋದರ ಲಖನೌ ಜಾರಕಿಹೊಳಿ ಈಗಾಗಲೇ ಆಗಮಿಸಿದ್ದಾರೆ ಎನ್ನಲಾಗಿದೆ. ಸಂಜೆ ಬಳಿಕ ಮೂವರು ಸಹೋದರು ಪ್ರಕರಣದ ಬಗ್ಗೆ ಚರ್ಚಿಸಿ ಒಂದು ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಯಾವುದಕ್ಕೂ ಕಾದು ನೋಡಬೇಕು.
Laxmi News 24×7