Breaking News
Home / ರಾಜ್ಯ / ಸಣ್ಣ ಉಳಿತಾಯಗಳ ಮೇಲಿನ ಬಡ್ಡಿದರ ಕಡಿತ: ಆದೇಶ ಹಿಂಪಡೆದ ಕೇಂದ್ರ ಸರ್ಕಾರ

ಸಣ್ಣ ಉಳಿತಾಯಗಳ ಮೇಲಿನ ಬಡ್ಡಿದರ ಕಡಿತ: ಆದೇಶ ಹಿಂಪಡೆದ ಕೇಂದ್ರ ಸರ್ಕಾರ

Spread the love

ನವದೆಹಲಿ: ಸಣ್ಣ ಉಳಿತಾಯಗಳ ಮೇಲಿನ ಬಡ್ಡಿದರ ಕಡಿತವನ್ನು ಕೇಂದ್ರ ಸರ್ಕಾರ ಹಿಂತೆಗೆದುಕೊಂಡಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಸಣ್ಣ ಉಳಿತಾಯ ಯೋಜನೆಗಳ ಮೇಲೆ ಬಡ್ಡಿದರ ಕಡಿತ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ನಿನ್ನೆ ಪ್ರಕಟಿಸಿತ್ತು. ಬ್ಯಾಂಕ್ ಗಳಲ್ಲಿ ನಿಶ್ಚಿತ ಠೇವಣಿಗಳ ಮೇಲಿನ ಬಡ್ಡಿದರ ಕಡಿತದಂತೆಯೇ 2021-22ನೇ ಆರ್ಥಿಕ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಎನ್ ಎಸ್ ಸಿ ಮತ್ತು ಪಿಪಿಎಫ್ ಸೇರಿದಂತೆ ಸಣ್ಣ ಉಳಿತಾಯಗಳ ಮೇಲೆ ಬಡ್ಡಿದರವನ್ನು ಶೇಕಡಾ 1.1ರಷ್ಟು ಕಡಿತ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು.

ಪಿಪಿಎಫ್ ಮೇಲಿನ ಬಡ್ಡಿದರವನ್ನು ಕೇಂದ್ರ ಸರ್ಕಾರ ಶೇಕಡಾ 0.7ರಿಂದ 6.4ರವರೆಗೆ ಎನ್ ಎಸ್ ಸಿಯ ಬಡ್ಡಿದರವನ್ನು ಶೇಕಡಾ 0.9ರಿಂದ ಶೇಕಡಾ 5.9ರವರೆಗೆ ಕಡಿತ ಮಾಡಲಾಗಿತ್ತು.

ಆದರೆ ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿ, ಕಳೆದ ರಾತ್ರಿಯ ಆದೇಶವನ್ನು ಹಿಂತೆಗೆದುಕೊಳ್ಳಲಾಗಿದೆ. ಸಣ್ಣ ಉಳಿತಾಯಗಳ ಮೇಲಿನ ಬಡ್ಡಿದರವನ್ನು ಕಳೆದ ಆರ್ಥಿಕ ಸಾಲಿನ ನಾಲ್ಕನೇ ತ್ರೈಮಾಸಿಕ ಅವಧಿಯಲ್ಲಿದ್ದಂತೆಯೇ ಮುಂದುವರಿಸಲಾಗುವುದು ಎಂದಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ