Breaking News
Home / ಜಿಲ್ಲೆ / ಬೆಂಗಳೂರು / ಪೋಷಕರನ್ನು ಮಾತನಾಡಿಸಬೇಕು ಎಂದು ಬಿಕ್ಕಿಬಿಕ್ಕಿ ಅತ್ತಿದ್ದಾರೆ ಯುವತಿ,

ಪೋಷಕರನ್ನು ಮಾತನಾಡಿಸಬೇಕು ಎಂದು ಬಿಕ್ಕಿಬಿಕ್ಕಿ ಅತ್ತಿದ್ದಾರೆ ಯುವತಿ,

Spread the love

ಬೆಂಗಳೂರು: ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಎಸ್​ಐಟಿ ವಿಚಾರಣೆ ವೇಳೆ ಸಿಡಿ ಸಂತ್ರಸ್ತೆ ಬಿಕ್ಕಿಬಿಕ್ಕಿ ಅತ್ತಿದ್ದಾರೆ ಎಂದು ತಿಳಿದುಬಂದಿದೆ. ಎಸ್​ಐಟಿ ಅಧಿಕಾರಿಗಳ ಯಾವುದೇ ಪ್ರಶ್ನೆಗಳಿಗೆ ಉತ್ತರಿಸದೇ ಪೋಷಕರನ್ನು ಮಾತನಾಡಿಸಬೇಕು ಎಂದು ಪಟ್ಟು ಹಿಡಿದಿರುವ ಯುವತಿ, ಪೋಷಕರ ಭೇಟಿಗೆ ಅನುಮತಿ ನೀಡುವಂತೆ ಅಧಿಕಾರಿಗಳ ಮುಂದೆ ಕಣ್ಣೀರಿಟ್ಟಿದ್ದಾರೆ.

ಆದರೆ, ಈ ವೇಳೆ ಸಂತ್ರಸ್ತೆಯನ್ನು ಸಮಾಧಾನ ಮಾಡಿರುವ ಎಸ್​ಐಟಿ ಅಧಿಕಾರಿಗಳು ಅನುಮತಿ ನೀಡಲಾಗುವುದಿಲ್ಲ ಎಂದು ಮನವೊಲಿಸುವ ಯತ್ನ ಮಾಡಿದ್ದಾರೆ. ನಾವು ಈಗ ನಿಮ್ಮ ಪೊಷಕರನ್ನ ಕರೆಸಿದರೆ ನಮ್ಮ ಮೇಲೆಯೇ ಆರೋಪ ಬರುತ್ತದೆ. ಪೊಷಕರನ್ನ ಕರೆಸಿ ಮನವೊಲಿಕೆಗೆ ಯತ್ನಿಸಿದ್ದಾರೆಂದು ಆರೋಪಿಸುತ್ತಾರೆ. ಹೀಗಾಗಿ ಯಾವುದೇ ಕಾರಣಕ್ಕೂ ಭೇಟಿಯಾಗಲು ಅವಕಾಶ ಕೊಡುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಲೆತ್ನಿಸಿದರೂ ಯುವತಿ ತನ್ನ ಪಟ್ಟು ಸಡಲಿಸದೇ ಕಣ್ಣೀರಿಟ್ಟು ತಾಯಿಯೊಂದಿಗೆ ಮಾತನಾಡಲಾದರೂ ಅವಕಾಶ ಕೊಡುವಂತೆ ಕೇಳಿಕೊಂಡಿದ್ದಾರೆ.

ಯುವತಿಯ ಒತ್ತಾಯಕ್ಕೆ ಕಡೆಗೂ ಕೆಲ ಷರತ್ತುಗಳನ್ನು ವಿಧಿಸಿ ಅನುಮತಿ ನೀಡುವುದಾಗಿ ಹೇಳಿರುವ ಎಸ್​ಐಟಿ ಅಧಿಕಾರಿಗಳು, ಮಾನವೀಯತೆ ಯಿಂದ ನಿಮಗೆ ಅವಕಾಶ ಕೊಡುತ್ತೇವೆ. ಆದರೆ, ನಿಮ್ಮ ವಕೀಲರ ಮೂಲಕ ನಮಗೆ ಒಂದು ಮನವಿ ಪತ್ರ ಕೊಡಿ. ಮನವಿ ಪತ್ರ ಸಿಕ್ಕ ನಂತರ ನಾವೇ ನಿಮ್ಮ ಪೊಷಕರನ್ನ ಇಲ್ಲಿಗೆ ಕರೆಸುತ್ತೇವೆ ಎಂದು ತಿಳಿಸಿರುವುದಾಗಿ ಮಾಹಿತಿ ಲಭ್ಯವಾಗಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ