Breaking News
Home / ಜಿಲ್ಲೆ / ಬೆಂಗಳೂರು / ಮಾಜಿ ಸಿಎಂ ಕುಮಾರಸ್ವಾಮಿ ಸೇರಿ ಐವರು ಶಾಸಕರಿಗೆ ಸಮನ್ಸ್ ಜಾರಿ

ಮಾಜಿ ಸಿಎಂ ಕುಮಾರಸ್ವಾಮಿ ಸೇರಿ ಐವರು ಶಾಸಕರಿಗೆ ಸಮನ್ಸ್ ಜಾರಿ

Spread the love

ಬೆಂಗಳೂರು: ಜೆಡಿಎಸ್ ತೊರೆಯಲು 5 ಕೋಟಿ ರೂಪಾಯಿ ಆಮಿಷವೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಶಾಸಕ ಶ್ರೀನಿವಾಸ್ ಗೌಡ, ಡಿಸಿಎಂ ಅಶ್ವತ್ಥ ನಾರಾಯಣ, ಸಚಿವ ಯೋಗೇಶ್ವರ್, ಎಸ್.ಆರ್. ವಿಶ್ವನಾಥ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ.

ಜೆಡಿಎಸ್ ಪಕ್ಷ ತ್ಯಜಿಸಲೆಂದು ಬಿಜೆಪಿ ನಾಯಕರಿಂದ ಬರೋಬ್ಬರಿ 5 ಕೋಟಿ ರೂಪಾಯಿ ಆಮಿಷವೊಡ್ಡಲಾಗಿತ್ತು ಎಂದು ಆರೋಪಿಸಿ ಟಿ.ಜೆ. ಅಬ್ರಾಹಂ ಖಾಸಗಿ ದೂರು ದಾಖಲಿಸಿದ್ದರು. ಅಲ್ಲದೇ ಈ ಬಗ್ಗೆ ವಿಧಾನಸಭೆಯಲ್ಲಿಯೂ ಕೆ. ಶ್ರೀನಿವಾಸ್ ಗೌಡ ಪ್ರಸ್ತಾಪಿಸಿ ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ಈ ವಿಷಯ ತಿಳಿಸಿದ್ದಾಗಿ ಹೇಳಿದ್ದರು.

 

ತಮ್ಮ ಶಾಸಕರಿಗೆ ಬಿಜೆಪಿ 5 ಕೋಟಿ ರೂಪಾಯಿ ಆಮಿಷವೊಡ್ಡಿರುವ ವಿಚಾರ ಗೊತ್ತಿದ್ದರೂ ಹೆಚ್.ಡಿ. ಕುಮಾರಸ್ವಾಮಿ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ, ಯಾವುದೇ ದೂರು ದಾಖಲಿಸಿ ಅಕ್ರಮ ತಡೆದಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕುಮಾರಸ್ವಾಮಿ ಸೇರಿದಂತೆ 5 ಜನಪ್ರತಿನಿಧಿಗಳ ವಿರುದ್ಧ ಪ್ರಕರಣ ದಾಖಲಿಸಿ, ಸಮನ್ಸ್ ಜಾರಿ ಮಾಡಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ