ಜೈಪುರ, ಎ. 2: ಭಾರತೀಯ ಕಿಸಾನ್ ಒಕ್ಕೂಟ (ಬಿಕೆಯು)ದ ನಾಯಕ ರಾಕೇಶ್ ಟಿಕಾಯತ್ ಅವರ ವಾಹನ ವ್ಯೆಹದ ಮೇಲೆ ರಾಜಸ್ಥಾನದ ಅಲವರ್ ಜಿಲ್ಲೆಯ ತಾತರ್ಪುರ ಗ್ರಾಮದಲ್ಲಿ ಶುಕ್ರವಾರ ದಾಳಿ ನಡೆದಿದೆ. ಈ ದಾಳಿಯಿಂದ ಟಿಕಾಯತ್ ಅವರ ಕಾರಿನ ಕಿಟಕಿಯ ಗಾಜು ಒಡೆದಿದೆ ಎಂದು ತಿಳಿದು ಬಂದಿದೆ. ರಾಕೇಶ್ ಟಿಕಾಯತ್ ಅವರ ವಾಹನ ಅಲವಾರ್ನ ಹರಸೋರಾ ಗ್ರಾಮದಿಂದ ಬಾನಸೂರ್ಗೆ ಸಂಚರಿಸುತ್ತಿದ್ದ ಸಂದರ್ಭ ಈ ದಾಳಿ ನಡೆದಿದೆ. ಹರಸೋರಾದಲ್ಲಿ ರೈತರ ಸಭೆ ಉದ್ದೇಶಿಸಿ ಮಾತನಾಡಿದ ಬಳಿಕ ರಾಕೇಶ್ ಟಿಕಾಯತ್ ಅವರು ಬಾನಸೂರ್ಗೆ ತೆರಳುತ್ತಿದ್ದರು. ಹಾನಿಗೀಡಾದ ಕಾರಿನ ವೀಡಿಯೊವನ್ನು ಟ್ವಿಟ್ಟರ್ನಲ್ಲಿ ಅಪ್ಲೋಡ್ ಮಾಡಿರುವ ರಾಕೇಶ್ ಟಿಕಾಯತ್, ಬಿಜೆಪಿ ಗೂಂಡಾಗಳು ಈ ದಾಳಿ ನಡೆಸಿದ್ದಾರೆ ಎಂದಿದ್ದಾರೆ. ”ರಾಜಸ್ಥಾನದ ಅಲವಾರ ಜಿಲ್ಲೆಯ ತಾತರ್ಪುರದ ಬಾನಸೂರ್ ರಸ್ತೆಯಲ್ಲಿ ಬಿಜೆಪಿಯ ಗೂಂಡಾಗಳು ದಾಳಿ ನಡೆಸಿದ್ದಾರೆ. ಇದು ಪ್ರಜಾಪ್ರಭುತ್ವದ ಸಾವು” ಎಂದು ಟಿಕಾಯತ್ ಟ್ವೀಟ್ ಮಾಡಿದ್ದಾರೆ.
Check Also
ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ
Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …