Breaking News
Home / ರಾಜ್ಯ / 7 ಗಂಟೆಗಳ ಕಾಲ ವಿಚಾರಣೆ ಎದುರಿಸಿ ಮತ್ತೆ ಅಜ್ಞಾತ ಸ್ಥಳಕ್ಕೆ CD ಯುವತಿ

7 ಗಂಟೆಗಳ ಕಾಲ ವಿಚಾರಣೆ ಎದುರಿಸಿ ಮತ್ತೆ ಅಜ್ಞಾತ ಸ್ಥಳಕ್ಕೆ CD ಯುವತಿ

Spread the love

ಬೆಂಗಳೂರು: CD ಪ್ರಕರಣದ ಸಂತ್ರಸ್ತ ಯುವತಿಯ ಇಂದಿನ ವಿಚಾರಣೆ ಅಂತ್ಯವಾಗಿದೆ. ಸಂತ್ರಸ್ತೆ ಇಂದು ಮಧ್ಯಾಹ್ನ 12.30ರ ವೇಳೆಗೆ ಆಡುಗೋಡಿಯ ಟೆಕ್ನಿಕಲ್​ ಸೆಲ್​ನಲ್ಲಿ ವಿಚಾರಣೆಗೆ ಹಾಜರಾಗಿದ್ದು, ಎಸ್​ಐಟಿಯ ಎಸಿಪಿ ಕವಿತಾ ವಿಚಾರಣೆ ನಡೆಸಿದ್ದಾರೆ.

ಪ್ರಕರಣ ಸಂಬಂಧ ನಿನ್ನೆ ಯುವತಿ ಈ ಹಿಂದೆ ವಾಸವಿದ್ದ ಸ್ಥಳ ಹಾಗೂ ಮಂತ್ರಿ ಗ್ರೌಡ್ಸ್​​ ಅಪಾರ್ಟ್​ಮೆಂಟ್​ನಲ್ಲಿ ಸ್ಥಳ ಮಹಜರು ನಡೆಸಿದ್ದ ಎಸ್‌ಐಟಿ ಅಧಿಕಾರಿಗಳು, ಪ್ರಮುಖ ವಸ್ತುಗಳನ್ನು ವಶಕ್ಕೆ ಪಡೆದಿದ್ದರು. ಈ ಸಂಬಂಧ ಇಂದು ಅಧಿಕಾರಿಗಳು ಯುವತಿಯನ್ನು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

ಸುಮಾರು 7 ಗಂಟೆಗಳ ಕಾಲ ವಿಚಾರಣೆ ನಡೆಸಿದ ಎಸ್​ಐಟಿ ಅಧಿಕಾರಿಗಳು, ಅಗತ್ಯ ಬಿದ್ದರೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಭದ್ರತೆಯಲ್ಲಿ ಅಜ್ಞಾತ ಸ್ಥಳಕ್ಕೆ ಕಳುಹಿಸಿಕೊಟ್ಟಿದ್ದಾರೆ.


Spread the love

About Laxminews 24x7

Check Also

ವೈದ್ಯರ ಸಹಾಯ ಪಡೆಯಲು ನಿರಾಕರಣೆ: ಕೇಜ್ರಿವಾಲ್‌ ಸಾವಿಗೆ ಪಿತೂರಿ; ಎಎಪಿ ಆರೋಪ

Spread the love ನವದೆಹಲಿ: ತಿಹಾರ್‌ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಇನ್ಸುಲಿನ್‌ ಪಡೆಯಲು ಮತ್ತು ವೈದ್ಯರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ