ಬೆಂಗಳೂರು: CD ಪ್ರಕರಣದ ಸಂತ್ರಸ್ತ ಯುವತಿಯ ಇಂದಿನ ವಿಚಾರಣೆ ಅಂತ್ಯವಾಗಿದೆ. ಸಂತ್ರಸ್ತೆ ಇಂದು ಮಧ್ಯಾಹ್ನ 12.30ರ ವೇಳೆಗೆ ಆಡುಗೋಡಿಯ ಟೆಕ್ನಿಕಲ್ ಸೆಲ್ನಲ್ಲಿ ವಿಚಾರಣೆಗೆ ಹಾಜರಾಗಿದ್ದು, ಎಸ್ಐಟಿಯ ಎಸಿಪಿ ಕವಿತಾ ವಿಚಾರಣೆ ನಡೆಸಿದ್ದಾರೆ.
ಪ್ರಕರಣ ಸಂಬಂಧ ನಿನ್ನೆ ಯುವತಿ ಈ ಹಿಂದೆ ವಾಸವಿದ್ದ ಸ್ಥಳ ಹಾಗೂ ಮಂತ್ರಿ ಗ್ರೌಡ್ಸ್ ಅಪಾರ್ಟ್ಮೆಂಟ್ನಲ್ಲಿ ಸ್ಥಳ ಮಹಜರು ನಡೆಸಿದ್ದ ಎಸ್ಐಟಿ ಅಧಿಕಾರಿಗಳು, ಪ್ರಮುಖ ವಸ್ತುಗಳನ್ನು ವಶಕ್ಕೆ ಪಡೆದಿದ್ದರು. ಈ ಸಂಬಂಧ ಇಂದು ಅಧಿಕಾರಿಗಳು ಯುವತಿಯನ್ನು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.
ಸುಮಾರು 7 ಗಂಟೆಗಳ ಕಾಲ ವಿಚಾರಣೆ ನಡೆಸಿದ ಎಸ್ಐಟಿ ಅಧಿಕಾರಿಗಳು, ಅಗತ್ಯ ಬಿದ್ದರೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಭದ್ರತೆಯಲ್ಲಿ ಅಜ್ಞಾತ ಸ್ಥಳಕ್ಕೆ ಕಳುಹಿಸಿಕೊಟ್ಟಿದ್ದಾರೆ.