Breaking News

ಸರಳವಾಗಿ ಸ್ವಾತಂತ್ರ್ಯೋತ್ಸವ ಅಚರಣೆಗೆ ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ

Spread the love

ನವದೆಹಲಿ, ಜು.24-ದೇಶದಾದ್ಯಂತ ಕೊರೊನಾ ವೈರಸ್ ಹಾವಳಿ ಆತಂಕಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದ್ದು, ಆಗಸ್ಟ್ 15ರ ಸ್ವಾತಂತ್ರೋತ್ಸವ ದಿನಾಚರಣೆ ಸಡಗರ-ಸಂಭ್ರಮಕ್ಕೆ ಅಡ್ಡಿಯಾಗಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ ಸುತ್ತೋಲೆಗಳನ್ನು ಹೊರಡಿಸಿ ಅತ್ಯಂತ ಸರಳವಾಗಿ ಮತ್ತು ಜಾಗ್ರತೆಯಿಂದ ರಾಷ್ಟ್ರ ಹಬ್ಬ ಆಚರಿಸುವಂತೆ ತಿಳಿಸಿದೆ.

ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ಸ್ವಾತಂತ್ರ ದಿನಾಚರಣೆಯಂದು ಅನುಸರಿಸಬೇಕಾದ ಕ್ರಮಗಳ ಕುರಿತು ವಿಶೇಷ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಸ್ವಾತಂತ್ರೋತ್ಸವ ಸಂದರ್ಭದಲ್ಲಿ ಅತಿ ಹೆಚ್ಚು ಜನರು ಸೇರಬಾರದು. ಅತ್ಯಂತ ಸರಳವಾಗಿ ಮತ್ತು ಮುಂಜಾಗ್ರತಾ ಕ್ರಮಗಳೊಂದಿಗೆ ರಾಷ್ಟ್ರೀಯ ಹಬ್ಬ ಆಚರಿಸಲಬೇಕು. ಸಾಮಾಜಿಕ ಅಂತರ ಕಾಯ್ಸುಕೊಳ್ಳುವಿಕೆ, ಸ್ಯಾಬಿಟೈಸರ್ ಬಳಕೆ, ಮತ್ತು ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಕೇಂದ್ರ ಸರ್ಕಾರ ಮಾರ್ಗಸೂಚಿಯಲ್ಲಿ ತಿಳಿಸಿದೆ

ಆಗಸ್ಟ್ 15ರಂದು ವೈದ್ಯರು, ಆರೋಗ್ಯ ಕಾರ್ಯಕರ್ತರು ಸೇರಿದಂತೆ ಕೊರೊನಾ ವಾರಿಯರ್ಸ್‍ಗಳಿಗೆ ಆಹ್ವಾನ ನೀಡಿ. ಡೆಡ್ಲಿ ಕೋವಿಡ್-19 ವೈರಸ್ ರೋಗದಿಂದ ಗುಣಮುಖರಾದವರನ್ನು ಈ ಸರಳ ಕಾರ್ಯಕ್ರಮಕ್ಕೆ ಆಮಂತ್ರಿಸಿ ಎಂದು ತಿಳಿಸಲಾಗಿದೆ.

ಈ ಬಾರಿ ರಾಜ್ಯ ಸರ್ಕಾರದಿಂದ ಅದ್ದೂರಿ ಸ್ವಾತಂತ್ರ ದಿನಾಚರಣೆ ಬದಲು ಸರಲ ರೀತಿಯಲ್ಲಿ ರಾಷ್ಟ್ರೀಯ ಹಬ್ಬ ನಡೆಯಲಿದೆ. ಆಯಾ ರಾಜ್ಯಗಳ ರಾಜ್ಯಪಾಲರು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗೌರ್ನರ್‍ಗಳು ರಾಜ್ಯಭವನದಿಂದಲೇ ಭಾಷಣ ಮಾಡಲಿದ್ದಾರೆ. ಅವರ ಭಾಷಣವನ್ನು ನೇರ ಪ್ರಸಾರ ಮಾಡಲಾಗುತ್ತದೆ.


Spread the love

About Laxminews 24x7

Check Also

ಕಂಬಳ ಅತ್ಯಂತ ಜನಪ್ರಿಯ ಗ್ರಾಮೀಣ ಕ್ರೀಡೆ: ಸಿಎಂ ಸಿದ್ದರಾಮಯ್ಯ

Spread the love    ಮಂಗಳೂರು : ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ