ಇವತ್ತು ಬೆಳಗಾವಿ ಗ್ರಾಮೀಣ ಕ್ಷೇತ್ರದ ಉಚಗಾಂವ ಪ್ರದೇಶದಲ್ಲಿ ಪಕ್ಷದ ಅಭ್ಯರ್ಥಿಯಾದ ಸನ್ಮಾನ್ಯ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರವಾಗಿ ಮತಯಾಚನೆಯ ಕಾರ್ಯಕ್ರಮ ಜರುಗಿತು.
ಸತೀಶಣ್ಣಾ ಜಾರಕಿಹೊಳಿಯವರು ಕಾಂಗ್ರೆಸ್ ಪಕ್ಷದ ಶಕ್ತಿಯಾಗಿದ್ದು, ಕಳೆದ 30 ವರ್ಷಗಳಿಂದ ಹಲವಾರು ಅಭಿವೃದ್ಧಿ ಕಾರ್ಯಗಳು, ಸಾಮಾಜಿಕ ಚಟುವಟಿಕೆಗಳು ಸೇರಿದಂತೆ ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ನಾಯಕರಾಗಿದ್ದಾರೆ. ಹೀಗಾಗಿ, ಎಪ್ರಿಲ್ 17 ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ಸತೀಶಣ್ಣಾ ಅವರನ್ನು ಗೆಲ್ಲಿಸುವ ಮೂಲಕ ದಿಲ್ಲಿಗೆ ಸಂದೇಶ ರವಾನಿಸಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.
ಸತೀಶ ಅಣ್ಣನವರ ಗೆಲುವಿಗೆ ಕ್ಷೇತ್ರದ ಪ್ರತಿಯೊಬ್ಬ ಕಾರ್ಯಕರ್ತರು ಹಗಲು-ರಾತ್ರಿ ಎನ್ನದೇ ಶ್ರಮಿಸಬೇಕು, ನಮ್ಮ ಬೆಳಗಾವಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ಇದನ್ನು ನಾವು ಇನ್ನಷ್ಟು ಭದ್ರಗೊಳಿಸೋಣ ಎಂದು ಈ ಸಂದರ್ಭದಲ್ಲಿ ಕಾರ್ಯಕರ್ತರಿಗೆ ಕರೆ ನೀಡಿದ್ದೇನೆ.
ಇದೇ ಸಂದರ್ಭದಲ್ಲಿ ಸತೀಶಣ್ಣಾ ಜಾರಕಿಹೊಳಿಯವರು ಮಾತನಾಡಿ, ಗ್ರಾಮೀಣ ಕ್ಷೇತ್ರದ ಜನರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸಿದಂತೆ, ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ನನ್ನನ್ನು ಗೆಲ್ಲಿಸಬೇಕು. ಇದರಿಂದ ಶಾಸಕರು ಹಾಗೂ ಸಂಸದರು ಸೇರಿ ಮತಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.
“ಗ್ರಾಮೀಣ ಮತಕ್ಷೇತ್ರದ ಜನರೊಂದಿಗೆ ಮೊದಲಿನಿಂದಲೂ ನನಗೆ ನಿಕಟ ಸಂಪರ್ಕವಿದೆ. ಇಲ್ಲಿನ ಮತದಾರರು ಯಾವಾಗಲು ಕಾಂಗ್ರೆಸ್ ಪರವಾಗಿಯೇ ಇದ್ದಾರೆ. ಈ ಚುನಾವಣೆಯಲ್ಲೂ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ” ಎಂದು ಗ್ರಾಮೀಣ ಮತದಾರರ ಬಗ್ಗೆ ಸತೀಶಣ್ಣಾ ಮೆಚ್ಚುಗೆ ವ್ಯಕ್ತಪಡಿಸಿದರು.