Breaking News

ಮಂಜುಕವಿದ ವಾತಾವರಣ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಮಂಗಳೂರಿಗೆ

Spread the love

ಹುಬ್ಬಳ್ಳಿ, ಏಪ್ರಿಲ್ 3: ದಟ್ಟವಾದ ಮಂಜು ಹಾಗೂ ಮೋಡಕವಿದ ವಾತಾವರಣವಿದ್ದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ ವಿಮಾನ, ಮಂಗಳೂರು ಕಡೆಗೆ ಹಾರಾಟ ನಡೆಸಿದ ಘಟನೆ ಶನಿವಾರ ಮುಂಜಾನೆ ನಡೆದಿದೆ.

 

ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ ಇಂಡಿಗೋ ವಿಮಾನ ಮಾರ್ಗ ಬದಲಿಸಿಕೊಂಡು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಡೆಗೆ ಪ್ರಯಾಣ ಬೆಳೆಸಿತು.

ಶನಿವಾರ ಬೆಳಗ್ಗೆ ಸರಿಯಾಗಿ 7.20ಕ್ಕೆ ಆಗಮಿಸಿದ ಇಂಡಿಗೋ ವಿಮಾನ, ಹುಬ್ಬಳ್ಳಿ ನಗರ ಸುತ್ತಮುತ್ತ ದಟ್ಟ ಮಂಜು ಆವರಿಸಿತ್ತು. ಲ್ಯಾಂಡ್ ಅಗಲು ವಾತಾವರಣ ಸಹಕಾರಿ ಆಗಲಿಲ್ಲ. ಸುಮಾರು ಇಪ್ಪತ್ತು ನಿಮಿಷದ ನಂತರ ಮಾರ್ಗ ಬದಲಿಸಿ ಮಂಗಳೂರಿಗೆ ತೆರಳಿತು. ವಿಮಾನದಲ್ಲಿ ಸುಮಾರು 65ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ