Breaking News

ಮತ್ತೊಮ್ಮೆ ಸಿಆರ್ ಪಿಸಿ 164 ಹೇಳಿಕೆ ದಾಖಲಿಸಿಕೊಳ್ಳಬೇಕೆಂದು ಒತ್ತಾಯಿಸಿದ ಯುವತಿಯ ಪೋಷಕರು

Spread the love

ಬೆಂಗಳೂರು: ಮಾಜಿ ಸಚಿವರ ಸಿಡಿ ಪ್ರಕರಣದ ಸಂತ್ರಸ್ತ ಯುವತಿ ನ್ಯಾಯಾಧೀಶರ ಮುಂದೆ ಮತ್ತೊಮ್ಮೆ ಸಿಆರ್ ಪಿಸಿ 164 ಹೇಳಿಕೆ ದಾಖಲಿಸುತ್ತಾರಾ ಅನ್ನೋ ಬಗ್ಗೆ ಅನುಮಾನಗಳು ಹುಟ್ಟಿಕೊಂಡಿವೆ. ಇತ್ತ ಯುವತಿಯ ಪೋಷಕರು ಮತ್ತೊಮ್ಮೆ ಮಗಳ ಹೇಳಿಕೆಯನ್ನ ದಾಖಲಿಸಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಈ ಹಿನ್ನೆಲೆ ಪೋಷಕರು ಮತ್ತೊಮ್ಮೆ ಹೇಳಿಕೆ ದಾಖಲಿಸಿಕೊಳ್ಳಬೇಕೆಂದು ನ್ಯಾಯಾಲಯದ ಮೊರೆ ಹೋಗುವ ಸಾಧ್ಯತೆಗಳಿವೆ. ಇತ್ತ ಕೌನ್ಸಲಿಂಗ್ ನಲ್ಲಿ ಯುವತಿ ಸೂಕ್ತ ಉತ್ತರ ನೀಡಿಲ್ಲ ಎಂದು ಹೇಳಲಾಗುತ್ತಿದ್ದು, ಇಂದು ಬೌರಿಂಗ್ ಆಸ್ಪತ್ರೆಗೆ ಕರೆ ತರುವ ಸಾಧ್ಯತೆಗಳಿವೆ. ಕೌನ್ಸಲಿಂಗ್ ಬಳಿಕವೇ ಎಸ್‍ಐಟಿ ತಂಡ ಯುವತಿಯಿಂದ ಸಿಆರ್ ಪಿಸಿ 161 ಹೇಳಿಕೆ ಪಡೆದುಕೊಳ್ಳಲಿದೆ ಎಂಬ ಮಾಹಿತಿ ಲಭ್ಯವಾಗಿದೆ.


Spread the love

About Laxminews 24x7

Check Also

ಸಮುದಾಯ ಭವನ ನಿರ್ಮಾಣಕ್ಕೆ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ 1.50 ಕೋಟಿ ರೂಪಾಯಿ ವೆಚ್ಚದ ಕಟ್ಟಡದ ಕಾಮಗಾರಿಗೆ ಚಾಲನೆ

Spread the love ಸಮುದಾಯ ಭವನ ನಿರ್ಮಾಣಕ್ಕೆ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ 1.50 ಕೋಟಿ ರೂಪಾಯಿ ವೆಚ್ಚದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ