Breaking News
Home / ರಾಜ್ಯ / ಮಗಳ ಅತ್ಯಾಚಾರದ ಆರೋಪಕ್ಕೆ ಮನನೊಂದ ತಂದೆ ನೇಣಿಗೆ ಶರಣು

ಮಗಳ ಅತ್ಯಾಚಾರದ ಆರೋಪಕ್ಕೆ ಮನನೊಂದ ತಂದೆ ನೇಣಿಗೆ ಶರಣು

Spread the love

ಮಡಿಕೇರಿ: ಡೆತ್‌ನೋಟ್ ಬರೆದಿಟ್ಟು ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮರಗೋಡುನಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು ಪುದಿಯೊಕ್ಕಡ ಭರತ್(55) ಎಂದು ಗುರುತಿಸಲಾಗಿದೆ. ತನ್ನ ಸಾವಿಗೆ ಪತ್ನಿ, ಮಗಳೇ ಕಾರಣವೆಂದು ಡೆತ್‌ನೋಟ್​ನಲ್ಲಿ ಭರತ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದೊಂದು ಅಪರೂಪದ ಪ್ರಕರಣವಾಗಿದ್ದು ಈ ಹಿಂದೆ ಸ್ವಂತ ಅಪ್ಪನ ಮೇಲೆಗೆ ಮಗಳು ಅತ್ಯಾಚಾರದ ಆರೋಪ ಹೊರಿಸಿದ್ದಳು. ಹಾಗೂ ಹೆಂಡತಿ, ಮಗಳು ಸೇರಿಕೊಂಡು ಭರತ್​ನಿಗೆ ಚಿತ್ರ ಹಿಂಸೆ ನೀಡುತ್ತಿದ್ದರಂತೆ. ಹೀಗಾಗಿ ಮನನೊಂದ ಭರತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಸಾವಿಗೆ ಪತ್ನಿ, ಮಗಳೇ ಕಾರಣವೆಂದು ಡೆತ್‌ನೋಟ್ ಬರೆದಿಟ್ಟಿದ್ದಾರೆ. ಭರತ್ ಪುತ್ರಿ ಮೇಘ ತಂದೆಯ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ್ದಳು. ಆದ್ರೆ ಈ ಕೇಸ್ ಕೋರ್ಟ್​ನಲ್ಲಿ ನಿಲ್ಲಲಿಲ್ಲ. ವಾದ-ಪ್ರತಿವಾದ, ತನಿಖೆಗಳಾಗಿ ಕೊನೆಗೆ ಭರತ್ ಆರೋಪ ಮುಕ್ತನಾಗಿ ಬಂದಿದ್ದರು.

ಆದ್ರೆ ಆರೋಪ ಮುಕ್ತರಾಗಿ ಬಂದಿದ್ದರೂ ತೀವ್ರ ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಪತ್ನಿ ಮತ್ತು ಮಗಳ ವಿರುದ್ಧ ಭರತ್ ಡೆತ್‌ನೋಟ್‌ನಲ್ಲಿ ಆರೋಪ ಮಾಡಿದ್ದಾರೆ. ದೇಶದಲ್ಲಿ ಅತ್ಯಾಚಾರ ಕುರಿತ ಕಾನೂನು ಬದಲಾಗಬೇಕು ಎಂದು ಡೆತ್‌ನೋಟ್‌ನಲ್ಲಿ ಭರತ್ ಮನವಿ ಮಾಡಿಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.


Spread the love

About Laxminews 24x7

Check Also

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ