Breaking News

ಬೆಳಗಾವಿ ಉಪ ಚುನಾವಣೆ: ನಾಮಪತ್ರ ವಾಪಸ್; ಬಿಜೆಪಿಗೆ ಸಿಹಿ ಸುದ್ದಿ!

Spread the love

ಬೆಳಗಾವಿ, ಏಪ್ರಿಲ್ 3: ಏಪ್ರಿಲ್ 17ರಂದು ನಡೆಯುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೂ ಮುನ್ನ ಭಾರತೀಯ ಜನತಾ ಪಕ್ಷಕ್ಕೆ ತುಸು ನೆಮ್ಮದಿ ನೀಡುವ ಸುದ್ದಿ ಸಿಕ್ಕಿದೆ.

ದಿ.ಸುರೇಶ್ ಅಂಗಡಿ ಅವರ ಸಾವಿನಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಿಗದಿಯಾಗಿದ್ದು, ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.

 

ಈ ಬಾರಿ ಕಾಂಗ್ರೆಸ್ ಪಕ್ಷದಿಂದ ಸತೀಶ್ ಜಾರಕಿಹೊಳಿ ಸ್ಪರ್ಧಿಸುತ್ತಿರುವುದು ಕ್ಷೇತ್ರದಲ್ಲಿ ಇನ್ನಷ್ಟು ಪೈಪೋಟಿ ಏರ್ಪಟ್ಟಿದೆ. ಬಿಜೆಪಿಯಿಂದ ಸ್ಪರ್ಧಿಸಿರುವ ದಿ.ಸುರೇಶ್ ಅಂಗಡಿ ಅವರ ಪತ್ನಿ ಮಂಗಲ ಸುರೇಶ್ ಅಂಗಡಿ ಅವರು ಕ್ಷೇತ್ರದಾದ್ಯಂತ ಓಡಾಡುತ್ತಿದ್ದಾರೆ.

ಇದರ ಮಧ್ಯೆ ನಾಲ್ವರು ಪಕ್ಷೇತರ ಅಭ್ಯರ್ಥಿಗಳು ಬಿಜೆಪಿ ಅಭ್ಯರ್ಥಿ ಬೆಂಬಲ ನೀಡಿರುವುದು ಬಿಜೆಪಿ ಸ್ವಲ್ಪ ನಿಟ್ಟುಸಿರು ಬಿಡುವಂತಾಗಿದೆ. ಶನಿವಾರದಂದು ನಾಲ್ವರು ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದಾರೆ.

ನಾಮಪತ್ರ ವಾಪಸ್ ಪಡೆದ ಪಕ್ಷೇತರ ಅಭ್ಯರ್ಥಿಗಳು ಬಿಜೆಪಿ ಅಭ್ಯರ್ಥಿ ಮಂಗಲ ಸುರೇಶ್ ಅಂಗಡಿಗೆ ಬೆಂಬಲ ನೀಡಲು ಮುಂದೆ ಬಂದಿದ್ದಾರೆ. ಬಿಜೆಪಿ ಶಾಸಕ ಅನಿಲ್ ಬೆನಕೆ ನೇತೃತ್ವದಲ್ಲಿ ನಾಲ್ವರು ನಾಮಪತ್ರ ವಾಪಸ್ ಪಡೆದರು.

ಬೆಳಗಾವಿ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಗೆ ಆಗಮಿಸಿ ನಾಮಪತ್ರ ವಾಪಸ್ ಪಡೆದ ಪಕ್ಷೇತರ ಅಭ್ಯರ್ಥಿಗಳಾದ ಅಶೋಕ್ ಹನಜಿ, ಹನಮಂತ ನಾಗನೂರ, ಬಸವರಾಜ ಹುದ್ದಾರ್, ಸುರೇಶ್ ಪರಗಣ್ಣವರ್ ಬಿಜೆಪಿಗೆ ಬೆಂಬಲಿಸುವುದಾಗಿ ಘೋಷಿಸಿದ್ದಾರೆ. ಏಪ್ರಿಲ್ 17ರಂದು ಮತದಾನ ನಡೆಯಲಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ