Breaking News

ಸಿಡಿ ಲೇಡಿ ಪರ ವಕಾಲತ್ತು ವಹಿಸಿದ ವಕೀಲರಿಗೆ ಬಂತು ಕುತ್ತು

Spread the love

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕುತೂಹಲ ಹುಟ್ಟಿಸಿದ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೆಡೆ ಹಲವು ತಿರುವುಗಳು ಕಳೆದುಕೊಳ್ಳುತ್ತಿದ್ದಾರೆ, ಇನ್ನೊಂದೆಡೆ ಇವತ್ತು ಪರ ವಕಾಲತ್ತು ವಹಿಸಿದ ವಕೀಲರನ್ನು ಅಮಾನತುಗೊಳಿಸುವ ತಯಾರಿ ನಡೆಯುತ್ತದೆ.

ಮಾಧ್ಯಮಗಳ ಮುಂದೆ ಸಿಡಿ ಲೇಡಿಯ ಪರವಾಗಿ ಕೆ.ಎನ್​. ಜಗದೀಶ್​ ಅವರು ಮಾಹಿತಿ ನೀಡುತ್ತಿದ್ದರೆ, ಅಸಲಿಗೆ ಅವರು ಯುವತಿಯ ಪರವಾದ ನಿಜವಾದ ವಕೀಲರಲ್ಲ. ಬದಲಿಗೆ ಜಗದೀಶ್​ ಅವರ ಪಕ್ಕ ಇರುವ ಆರ್​.ಮಂಜುನಾಥ್​ ಅವರು ಯುವತಿಯ ಪರವಾಗಿ ವಕಾಲತ್ತು ವಹಿಸಿದ್ದಾರೆ. ಕೋರ್ಟ್​ನಲ್ಲಿ ವಾದ ಮಾಡುತ್ತಿರುವವರು ಇದೇ ಮಂಜುನಾಥ್​.

ಆದರೆ ಇದೀಗ ರಾಜ್ಯ ವಕೀಲರ ಪರಿಷತ್ತಿನ ನ (ಬಾರ್​ ಕೌನ್ಸೆಲ್​) ವಿರುದ್ಧ ಇಲ್ಲಸಲ್ಲದ ಆರೋಪ ಮಾಡುವ ಮೂಲಕ ತಮ್ಮ ವಕೀಲಿವೃತ್ತಿಗೆ ಕುತ್ತು ತಂದುಕೊಂಡಿದ್ದಾರೆ. ವಕೀಲರ ಪರಿಷತ್ತಿನ ವಿರುದ್ಧ ಕೆಲವು ಆರೋಪ ಮಾಡಿರುವ ಜಗದೀಶ್​ ಅವರು, ವಕೀಲರ ಕ್ಷೇಮಾಭಿವೃದ್ಧಿಗೆ ಸಂಬಂಧಿಸಿದಂತೆ ಇರುವ ವೆಲ್​ಫೇರ್​ ಸ್ಟ್ಯಾಂಪ್​ಗಳ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ.

ಯಾವುದೇ ವಕೀಲ ಒಂದು ಕೇಸ್​ನಲ್ಲಿ ವಕಾಲತ್ತು ವಹಿಸುವಾಗ ವೆಲ್​ಫೇರ್​ ಫಂಡ್​ ಸ್ಟ್ಯಾಂಪ್​ ಆ ವಕಾಲತ್ತಿಗೆ ಅಂಟಿಸುವುದು ಕಡ್ಡಾಯವಾಗಿದೆ. ಈ ಸ್ಟ್ಯಾಂಪ್​ ಹಣದ ರೂಪದಲ್ಲಿ ಅಥವಾ ಡಿಮಾಂಡ್​ಡ್ರಾಫ್ಟ್​ ರೂಪದಲ್ಲಿ ಇರಬಹುದು. ಇದು ವಕೀಲರ ಕ್ಷೇಮಾಭ್ಯುಯದ ದೃಷ್ಟಿಯಿಂದ ಇದನ್ನು ಜಾರಿಗೊಳಿಸಲಾಗಿದೆ. ಇದರ ವಿರುದ್ಧ ಮಂಜುನಾಥ್​ ವಕೀಲ ಸ್ಟ್ಯಾಂಪ್ ನಿಂದ ಸಂಗ್ರಹಿಸಿದ್ದ ಹಣದಲ್ಲಿ ಅಕ್ರಮ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಈ ಆರೋಪವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ವಕೀಲರ ಪರಿಷತ್ತು, ತನ್ನ ಸಭೆಯಲ್ಲಿ ಮಂಜುನಾಥ್​ ಅವರಿಗೆ ನೋಟಿಸ್​ ನೀಡಿದ್ದು, ಮುಂದಿನ ಆದೇಶದವರೆಗೆ ಸನ್ನದನ್ನು ಅಮಾನತುಗೊಳಿಸಿದೆ. ಯಾವುದೇ ವಕೀಲ ವಕೀಲಿವೃತ್ತಿ ನಡೆಸಲು ಅಥವಾ ಯಾವುದೇ ಕೇಸ್​ನಲ್ಲಿ ವಾದ ಮಂಡಿಸಲು ಈ ಪತ್ರದ ಅಗತ್ಯ ಬಹಳಷ್ಟಿದೆ. ಆದರೆ ಇದೀಗ ಅದರ ಅಮಾನತ್ತಿನ ಮೂಲಕ ಅವರಿಗೆ ಬಗ್ಗೆ ಇಲ್ಲ ವೃತ್ತಿಯನ್ನು ಮುಂದುವರಿಸಲು ಸಾಧ್ಯವಾಗುವುದಿಲ್ಲ.

ಅಷ್ಟೇ ಅಲ್ಲದೆ , ಅವರು ಕಳಿಸಿರುವ ನೋಟಿಸ್ಗೆ 10 ದಿನದೊಳಗೆ ಉತ್ತರಿಸಬೇಕು ಎಂದು ಮಂಜುನಾಥ್ ಅವರಿಗೆ ತಿಳಿಸಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಅವರು ಯಾವುದೇ ಕೇಸ್ ಗಳಲ್ಲಿ ವಾದ ಮಂಡಿಸುತ್ತಿಲ್ಲ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ