Breaking News
Home / ನವದೆಹಲಿ / ಬಾಬರಿ ಮಸೀದಿ ಧ್ವಂಸ ಪ್ರಕರಣ : ಅಡ್ವಾಣಿ ಹೇಳಿಕೆ ದಾಖಲು

ಬಾಬರಿ ಮಸೀದಿ ಧ್ವಂಸ ಪ್ರಕರಣ : ಅಡ್ವಾಣಿ ಹೇಳಿಕೆ ದಾಖಲು

Spread the love

ಲಖನೌ, ಜು.24- ಅಯೋಧ್ಯೆಯಲ್ಲಿನ ಪ್ರಾಚೀನ ಬಾಬರಿ ಮಸೀದಿ ಧ್ವಂಸ ಪ್ರಕರಣದ ಸಂಬಂಧ ಬಿಜೆಪಿ ಧುರೀಣ ಮತ್ತು ಮಾಜಿ ಉಪ ಪ್ರಧಾನಮಂತ್ರಿ ಲಾಲ್‍ಕೃಷ್ಣ ಅಡ್ವಾಣಿ ಅವರ ಹೇಳಿಕೆಗಳನ್ನು ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯ ಇಂದು ದಾಖಲಿಸಿಕೊಂಡಿದೆ.

ಅಡ್ವಾಣಿ ಅವರು ವಿಡಿಯೋ ಲಿಂಕ್ ಮೂಲಕ ನೀಡಿದ ಹೇಳಿಕೆಯನ್ನು ವಿಶೇಷ ನ್ಯಾಯಮೂರ್ತಿ ಎಸ್.ಕೆ.ಯಾದವ್ ಅವರ ನೇತೃತ್ವದ ನ್ಯಾಯಾಲಯವು ದಾಖಲಿಸಿಕೊಂಡಿತ್ತು.

ನಿನ್ನೆ ಬಿಜೆಪಿ ಧುರೀಣ ಮತ್ತು ಕೇಂದ್ರದ ಮಾಜಿ ಸಚಿವ ಡಾ.ಮುರಳಿ ಮನೋಹರ್ ಜೋಷಿ ವಿಡಿಯೋ ಲಿಂಕ್ ಮೂಲಕ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ತಮ್ಮ ಹೇಳಿಕೆಗಳನ್ನು ನೀಡಿದ್ದರು.

ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಆರೋಪಿಗಳಾಗಿರುವ ಎಲ್ಲರ ಹೇಳಿಕೆಗಳನ್ನೂ ವಿಶೇಷ ನ್ಯಾಯಾಲಯ ದಾಖಲಿಸಿಕೊಳ್ಳುತ್ತಿದೆ.


Spread the love

About Laxminews 24x7

Check Also

‘ಅಂಬರೀಶ್ ಆಶೀರ್ವಾದದಿಂದ ಮಗನ ಸಿನಿಮಾ ಬಿಡುಗಡೆ’: ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ

Spread the love ಮಂಡ್ಯ: ಇಂದು ಕನ್ನಡಿಗರ ಮೆಚ್ಚಿನ ನಟ ಅಂಬರೀಶ್ ಅವರ 5ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ, ಮಂಡ್ಯದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ