Breaking News
Home / ರಾಜ್ಯ / ಎಪಿಎಂಸಿಗೆ ಭೂಮಿ ಕೊಟ್ಟ ರೈತನಿಗಿಲ್ಲ ಪರಿಹಾರ- ಕೋರ್ಟ್ ಆದೇಶ ಮೇರೆಗೆ ಎಪಿಎಂಸಿ ಕಚೇರಿ ಜಪ್ತಿ

ಎಪಿಎಂಸಿಗೆ ಭೂಮಿ ಕೊಟ್ಟ ರೈತನಿಗಿಲ್ಲ ಪರಿಹಾರ- ಕೋರ್ಟ್ ಆದೇಶ ಮೇರೆಗೆ ಎಪಿಎಂಸಿ ಕಚೇರಿ ಜಪ್ತಿ

Spread the love

ಗದಗ: ಅಡಿಕೆಗೆ ಹೋದ ಮಾನ ಆನೆ ಕೋಟ್ರು ಬಾರದು ಅಂತಾರೆ. ಅದರಂತಾಗಿದೆ ಗದಗ ಎಪಿಎಂಸಿ ಕಚೇರಿ ಕಥೆ. ಗದಗ ನಗರದ ಎಪಿಎಂಸಿ ಕಚೇರಿಯನ್ನ ಇಂದು ಜಪ್ತಿ ಮಾಡಲಾಗಿದೆ. ಕಾರಣ ಆರ್.ಆರ್.ಹೇಮಂತನವರ ಎಂಬವರು 4 ಎಕರೆ 35 ಗುಂಟೆ ಜಾಗೆಯನ್ನು 40 ವರ್ಷಗಳ ಹಿಂದೆ ಎಪಿಎಂಸಿಗಾಗಿ ಸ್ವಾದೀನಪಡಿಸಿಕೊಂಡಿತ್ತು. ಆಗ ಸುಮಾರು 76 ಲಕ್ಷ ರೂಪಾಯಿ ಪರಿಹಾರ ಹಣ ಬಿಡುಗಡೆ ಮಾಡಿದ ಎಪಿಎಂಸಿ, ಇನ್ನುಳಿದ 16.50 ಲಕ್ಷ ರೂಪಾಯಿ ಪಾವತಿಸಲು ವಿಳಂಬ ಮಾಡಿದೆ.

ಈ ಪ್ರಕರಣ ಇಂದು ನಿನ್ನೆಯದಲ್ಲ. ಸುಮಾರು 40 ವರ್ಷಗಳ ಹಳೆಯ ಪ್ರಕರಣ. ಗದಗಿನಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ರಚನೆಗಾಗಿ 1977ರಲ್ಲಿ ಭೂ ಸ್ವಾಧೀನ ಅಧಿಸೂಚನೆ ಹೊರಡಿಸಿತ್ತು. 1982ರಲ್ಲಿ ಆರ್.ಆರ್.ಹೇಮಂತನವರ ಜಮೀನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಎಪಿಎಂಸಿಯಿಂದ ಬರಬೇಕಿದ್ದ ಬಾಕಿ ಪರಿಹಾರ ಹಣಕ್ಕಾಗಿ ಸುಪ್ರೀಂ ಕೋರ್ಟ್‍ವರೆಗೆ ಹೋಗಿತ್ತು. ಪ್ರಕರಣ ಪುನಃ ಜಿಲ್ಲಾ ಪ್ರಧಾನ ಹಿರಿಯ ದಿವಾಣಿ ನ್ಯಾಯಾಲಯಕ್ಕೆ ಜ್ಞಾಪನಾ ಆದೇಶ ಆಗಿದ್ದರಿಂದ ಸದರಿ ಪ್ರಕರಣದಲ್ಲಿ ರೈತರಿಗೆ ಪ್ರತಿ ಚದರ ಅಡಿಗೆ 8.50 ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿತ್ತು.

ಅಧಿಕಾರಿಗಳು ಅಂದಿನಿಂದ ಇಂದಿನವರೆಗೂ ವಿನಾಕಾರಣ ವಿಳಂಬ ಮಾಡುತ್ತಲೇ ಬಂದಿದ್ದರು. ಕೋರ್ಟ್ ಆದೇಶದಂತೆ ಕಚೇರಿ ಜಪ್ತಿ ಮಾಡಲಾಗಿದೆ. ಇತ್ತ ಜಪ್ತಿ ಕಾರ್ಯ ನಡೆಯುತ್ತಿದ್ದಂತೆ ಎಪಿಎಂಸಿ ಅಧಿಕಾರಿಗಳು ಪಲಾಯನಗೊಂಡರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ