Breaking News
Home / ಜಿಲ್ಲೆ / ಕಲಬುರ್ಗಿ / ಕೊರೊನಾ ಸಂದರ್ಭದಲ್ಲಿ ಪ್ರತಿಭಟನೆ ಕೈಬಿಡುವಂತೆ ಸಾರಿಗೆ ನೌಕರರಲ್ಲಿ ಸಚಿವ ಲಕ್ಷ್ಮಣ್ ಸವದಿ ಮನವಿ

ಕೊರೊನಾ ಸಂದರ್ಭದಲ್ಲಿ ಪ್ರತಿಭಟನೆ ಕೈಬಿಡುವಂತೆ ಸಾರಿಗೆ ನೌಕರರಲ್ಲಿ ಸಚಿವ ಲಕ್ಷ್ಮಣ್ ಸವದಿ ಮನವಿ

Spread the love

ಕಲಬುರಗಿ: ಕೊರೊನಾ ಸಂದರ್ಭದಲ್ಲಿ ಪ್ರತಿಭಟನೆ ಕೈಬಿಡುವಂತೆ ಸಾರಿಗೆ ನೌಕರರಲ್ಲಿ ಸಚಿವ ಲಕ್ಷ್ಮಣ್ ಸವದಿ ಮನವಿ ಮಾಡಿದ್ದಾರೆ.

ಸಾರಿಗೆ ನೌಕರರ ಪ್ರತಿಭಟನೆ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಯವಿಟ್ಟು ಕೊರೊನಾ ಸಂಕಷ್ಟದ ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ. ನೀತಿ ಸಂಹಿತೆಯಿಂದಾಗಿ ಬೇಡಿಕೆ ಈಡೇರಿಕೆಗೆ ಸಾಧ್ಯವಿಲ್ಲ. ಘೋಷಣೆ ಮಾಡುವ ಬಗ್ಗೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ ಎಂದರು.

ನೀತಿ ಸಂಹಿತೆ ಜಾರಿ ಇರೋದ್ರಿಂದ ಏನು ಹೇಳಲು ಆಗೋದಿಲ್ಲ. ಇಂದು ಸಾರಿಗೆ ನೌಕರರ ಜೊತೆ ಜೊತೆ ಅಧಿಕಾರಿಗಳು ಸಭೆ ನಡೆಸಲಿದ್ದಾರೆ ಎಂದರು.

ಇದೇ ವೇಳೆ ಮಸ್ಕಿ, ಬಸವಕಲ್ಯಾಣ, ಬೆಳಗಾವಿಯಲ್ಲಿ ಪ್ರಚಾರ ಮಾಡುತ್ತಿದ್ದೇವೆ. ಮೂರು ಕ್ಷೇತ್ರದಲ್ಲಿ ದೊಡ್ಡ ಅಂತರದಲ್ಲಿ ಬಿಜೆಪಿ ಗೆಲ್ಲುತ್ತದೆ. ನಮ್ಮಲ್ಲಿ ಸಣ್ಣಪುಟ್ಟ ಗೊಂದಲಗಳು ಇವೆ ವರಿಷ್ಠರು ಸರಿಪಡಿಸುತ್ತಾರೆ. ಆದರೆ ಕಾಂಗ್ರೆಸ್ಸಿನಲ್ಲಿ ಮನೆ ಒಂದು ಮೂರು ಬಾಗಿಲು ಆಗಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಬೆಳಗಾವಿ ಲೋಕಸಭಾ ಚುನಾವಣೆಗೆ ಒಪ್ತಾರಾ ಯತ್ನಾಳ್? ಏನು ಬಿಎಲ್ ಸಂತೋಷ್ ತಂತ್ರಗಾರಿಕೆ?

Spread the loveಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ (Former CM Jagadish Shettar) ಬೆಳಗಾವಿಯ ಬಿಜೆಪಿ ಅಭ್ಯರ್ಥಿ (Belagavi …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ