Breaking News
Home / ಜಿಲ್ಲೆ / ಬೆಂಗಳೂರು / ಬೇಡಿಕೆ ಈಡೇರುವವರೆಗೂ ಮುಷ್ಕರ ಮುಂದುವರಿಯಲಿದೆ : ಕೋಡಿಹಳ್ಳಿ ಚಂದ್ರಶೇಖರ್

ಬೇಡಿಕೆ ಈಡೇರುವವರೆಗೂ ಮುಷ್ಕರ ಮುಂದುವರಿಯಲಿದೆ : ಕೋಡಿಹಳ್ಳಿ ಚಂದ್ರಶೇಖರ್

Spread the love

ಬೆಂಗಳೂರು, ಏ.7- ಆರನೆ ವೇತನ ಜಾರಿಯಾಗುವವರೆಗೂ ಮುಷ್ಕರ ಮುಂದುವರಿಯಲಿದೆ ಎಂದು ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಬಸ್‍ಗಳಿಂದ ಸರ್ಕಾರಕ್ಕೆ ನಷ್ಟವೇ ಹೊರತು ಲಾಭವಿಲ್ಲ. ಸರ್ಕಾರ ಅವೈಜ್ಞಾನಿಕ ಪ್ರಯತ್ನ ಮಾಡುತ್ತಿದೆ. ನಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಯಲಿದೆ ಎಂದರು.

ಬಂದ್ ಯಶಸ್ಸಿಗೆ ಸಾರಿಗೆ ನೌಕರರ ನೋವುಗಳೇ ಕಾರಣ. ಹಲವು ದಿನಗಳಿಂದ ಅವರಿಗೆ ಸಾಕಷ್ಟು ಸಮಸ್ಯೆಗಳಿವೆ. ವ್ಯಕ್ತಿ ಪ್ರತಿಷ್ಠೆಗಿಂತ ನೌಕರರ ಸಮಸ್ಯೆ ಬಗೆಹರಿಸುವುದು ಮುಖ್ಯವಾಗಿದೆ. ಸಂಕಷ್ಟ ಇರುವುದು ದುಡಿಯುವ ಜನಕ್ಕೆ. ಸರ್ಕಾರ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಆರನೆ ವೇತನ ಆಯೋಗದ ಪ್ರಕಾರ ಸಂಬಳ ಹೆಚ್ಚಾಗಬೇಕು. ಈ ಪ್ರಕಾರವಾದರೆ ಶೇ.36ರಷ್ಟು ವೇತನ ಹೆಚ್ಚಾಗುತ್ತದೆ. ಆದರೆ, ಸರ್ಕಾರ ಶೇ.8ರಷ್ಟು ಹೆಚ್ಚಿಗೆ ಮಾಡುತ್ತೇವೆ ಎಂದು ಹೇಳುತ್ತಿದೆ. ಅವೈಜ್ಞಾನಿಕ ಪ್ರಯತ್ನ ಮಾಡುತ್ತಿದೆ. ಈ ಕಾಟಾಚಾರದ ಪ್ರಯತ್ನವನ್ನು ನಾವು ಒಪ್ಪುವುದಿಲ್ಲ. ಎಂಟು ಬೇಡಿಕೆಗಳನ್ನು ನ್ಯೂನ್ಯತೆಗಳೊಂದಿಗೆ ಜಾರಿ ಮಾಡಿದೆ.

ಅವುಗಳು ಸಾರಿಗೆ ನೌಕರರ ಪರವಾಗಿಲ್ಲ. ಆರನೆ ವೇತನದ ಬಗ್ಗೆ ಮೊದಲು ನಿರ್ಧಾರವಾಗಲಿ. ನಂತರ ಉಳಿದ ಬೇಡಿಕೆಗಳ ಬಗ್ಗೆ ಮಾತನಾಡುತ್ತೇವೆ. ಆರನೆ ವೇತನ ಜಾರಿಯಾಗುವವರೆಗೂ ನಮ್ಮ ಮುಷ್ಕರ ಮುಂದುವರಿಯಲಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ