ಬೆಂಗಳೂರು : ರಾಜ್ಯಾದ್ಯಂತ ಸಾರಿಗೆ ನೌಕರರು ಕೆಲಸಕ್ಕೆ ಹಾಜರಾಗದೇ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇದರ ಪರಿಣಾಮ 135 ಬಸ್ಗಳು ಮಾತ್ರ ಇವತ್ತು ಸಂಚಾರ ಮಾಡುತ್ತಿವೆ. ನಗರದ ಯಶವಂತಪುರ ಬಸ್ ನಿಲ್ದಾಣಕ್ಕೆ ಬಿಎಂಟಿಸಿ ಎಂಡಿ ಶಿಖಾ ಆಗಮಿಸಿ ಪರಿಶೀಲನೆ ನಡೆಸಿದರು. ಬಳಿಕ ಮಾತಾನಾಡಿದ ಅವರು, ಬೆಂಗಳೂರಿನಲ್ಲಿ ಈವರೆಗೆ 135 ಬಿಎಂಟಿಸಿ ಬಸ್ಗಳು ಮಾತ್ರ ಸಂಚರಿಸುತ್ತಿವೆ.
ಮಂಗಳವಾರದ ಸಭೆಯಲ್ಲಿನ ತೀರ್ಮಾನದಂತೆ ಪರ್ಯಾಯವಾಗಿ ಖಾಸಗಿ ಬಸ್ಗಳನ್ನ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಪ್ರಯಾಣಿಕರಿಗೆ ಸ್ವಲ್ಪ ಅನುಕೂಲವಾಗಿದೆ. ಬಿಎಂಟಿಸಿ ವತಿಯಿಂದಲೂ ಪ್ರಮುಖ ನಿಲ್ದಾಣ, ಟರ್ಮಿನಲ್, ಜಂಕ್ಷನ್ನಲ್ಲಿ ಅಧಿಕಾರಿಗಳನ್ನ ನೇಮಿಸಲಾಗಿದ್ದು, ಖಾಸಗಿ ಬಸ್ನವರಿಗೆ ಮಾರ್ಗಸೂಚಿ ನೀಡುತ್ತಿದ್ದಾರೆ ಎಂದು ತಿಳಿಸಿದರು.
ಈವರೆಗೆ ಯಾವುದೇ ರೀತಿಯ ಸಮಸ್ಯೆ ಉಂಟಾಗಿಲ್ಲ. ಜನರಿಗೂ ಮೊದಲ ಮುಷ್ಕರದ ಮಾಹಿತಿ ಇದ್ದ ಕಾರಣ ಸ್ವಂತ ವಾಹನಗಳ ಮೊರೆ ಹೋಗಿದ್ದಾರೆ. ಕಳೆದ ಬಾರಿಯಂತೆ ಈ ಸಲ ಯಾವುದೇ ಪ್ರಯಾಣಿಕರ ದಟ್ಟನೆ ಸಮಸ್ಯೆ ಆಗಿಲ್ಲ ಎಂದರು.