ದೇವನಹಳ್ಳಿ: 6ನೇ ವೇತನ ಅಯೋಗ ಜಾರಿಗೆ ಒತ್ತಾಯಿಸಿ ಸಾರಿಗೆ ನೌಕರರು ಇಂದು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ಗಳು ಸಂಚರಿಸುತ್ತಿಲ್ಲ. ಹಾಗಾಗಿ ಪ್ರಯಾಣಿಕರು ದುಪ್ಪಟ್ಟು ಹಣ ಕೊಟ್ಟು ಟ್ಯಾಕ್ಸಿಗಳ ಮೊರೆ ಹೋಗುತ್ತಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಸಾರಿಗೆ ನೌಕರರ ಮುಷ್ಕರದ ಬಿಸಿ ತಟ್ಟಿದ್ದು, ದಿನಕ್ಕೆ 300 ಟ್ರಿಪ್ ವಾಯುವಜ್ರ ಬಸ್ಗಳುವಿಮಾನ ನಿಲ್ದಾಣದಿಂದ ಬೆಂಗಳೂರಿನ ವಿವಿಧ ಭಾಗಗಳಿಗೆ ಸಂಚರಿಸುತ್ತಿದ್ದವು. ಸದ್ಯಕ್ಕೆ ವಿಮಾನ ನಿಲ್ದಾಣದಲ್ಲಿ ಬಸ್ಗಳಿಲ್ಲದೆ ಪ್ರಯಾಣಿಕರು ದುಪ್ಪಟ್ಟು ಹಣ ಕೊಟ್ಟು ಖಾಸಗಿ ವಾಹನಗಳಲ್ಲಿ ಹೋಗುತ್ತಿದ್ದಾರೆ.