ಗದಗ: ಸಾರಿಗೆ ನೌಕರರು ಇಂದು ನಡೆಸುತ್ತಿರುವ ಮುಷ್ಕರದ ನಡುವೆಯೂ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ಪೀಲ್ಡಿಗಿಳಿದಿದೆ. ನಗರದ ಹೊಸ ಬಸ್ ನಿಲ್ದಾಣಕ್ಕೆ ಹೊಸಪೇಟೆ ಘಟಕದ ಬಸ್ ಪ್ರಯಾಣಿಕರನ್ನು ಹೊತ್ತು ತಂದಿದೆ.


ಕೆಲವರು ನಿನ್ನೆ ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆ ನಿಜ. ಆದರೆ ಬಂದ್ ಇರೋದು ಇಂದು. ಹಾಗಾಗಿ ಸರ್ಕಾರದ ಆದೇಶವನ್ನು ನಾವು ಪಾಲಿಸಿದ್ದೇವೆ. ಸಂಘಟಕರು ಮತ್ತು ಅಧಿಕಾರಿಗಳು ಹೇಳಿದರೆ ಮತ್ತೆ ಕರ್ತವ್ಯಕ್ಕೆ ಹಾಜರಾಗುತ್ತೇವೆ ಎಂದು ಹೊಸಪೇಟೆ ಘಟಕದ ಬಸ್ ಚಾಲಕರು ಮತ್ತು ನಿರ್ವಾಹಕರು ಅಭಿಪ್ರಾಯಪಟ್ಟಿದ್ದಾರೆ
Laxmi News 24×7