Breaking News

ಮುಂದುವರಿದ ಸಾರಿಗೆ ನೌಕರರ ಮುಷ್ಕರ: ಖಾಸಗಿ ಬಸ್ ಬಳಕೆ, ಪ್ರಯಾಣಿಕರ ಪರದಾಟ

Spread the love

ಬೆಂಗಳೂರು: ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಅತ್ತ ಸರ್ಕಾರ ಖಾಸಗಿ ಬಸ್ ಗಳನ್ನು ಬಳಸಲು ಅವಕಾಶ ನೀಡಿದ್ದರೆ, ಇತ್ತರ ಸಾರಿಗೆ ನೌಕರರೂ ಪಟ್ಟು ಬಿಡದೆ ಮುಷ್ಕರ ಮುಂದುವರಿಸಿದ್ದಾರೆ.

ಇಂದು ಸಹ ಯಾವುದೇ ಸಾರಿಗೆ ಬಸ್ ಸಂಚಾರ ಕಂಡುಬಂದಿಲ್ಲ. ಹೆಚ್ಚಿನೆಡೆ ಖಾಸಗಿ ಬಸ್ ಗಳನ್ನು ಬಳಸಲಾಗುತ್ತಿದೆ. ಆದರೆ ಪ್ರಯಾಣಿಕರು ಮಾತ್ರ ಪರದಾಡುವಂತಾಗಿದೆ.

ಒಂದೆಡೆ ಅನಿರ್ದಿಷ್ಟಾವಧಿ ಖಾಸಗಿ ವಾಹನಗಳ ಕಾರ್ಯಾಚರಣೆಗೆ ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮತ್ತೂಂದೆಡೆ ನೌಕರರನ್ನು ಮಣಿಸಲು ಒಂದೊಂದೇ ಅಸ್ತ್ರಗಳನ್ನು ಪ್ರಯೋಗಿಸುತ್ತಿದೆ. ಈ ಪೈಕಿ ಬುಧವಾರ ಸಂಜೆ ಸಾರಿಗೆ ನಿಗಮಗಳ ಉನ್ನತ ಅಧಿಕಾರಿಗಳು ಸಭೆ ನಡೆಸಿ, ಕರ್ತವ್ಯಕ್ಕೆ ಹಾಜರಾಗದ ತರಬೇತಿ ನೌಕರರನ್ನು ಕೈಬಿಡಲು ಚಿಂತನೆ ನಡೆಸಿದ್ದಾರೆ. ಈ ಸಂಬಂಧ ಕೆಳ ಹಂತದ ಅಧಿಕಾರಿಗಳಿಗೆ ಸೂಚಿಸಲು ನಿರ್ಧರಿಸಲಾಗಿದೆ. ಬಿಎಂಟಿಸಿಯಲ್ಲೂ ಸೇರಿದಂತೆ ಸಾವಿರಾರು ತರಬೇತಿ ನೌಕರ ರಿದ್ದು, ಅವರೆಲ್ಲರೂ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ.

ಪರೀಕ್ಷೆಗಳು ಮುಂದೂಡಿಕೆ: ರಾಜ್ಯ ಸಾರಿಗೆ ನೌಕರರ ಮುಷ್ಕರದಿಂದಾಗಿ ಬೆಂಗಳೂರು ವಿವಿ ಮತ್ತು ಮಂಗಳೂರು ವಿವಿ ಪರೀಕ್ಷೆಗಳನ್ನು ಮುಂದೂಡಿವೆ.

ಕರಾವಳಿಗೆ ತಟ್ಟದ ಬಂದ್ ಬಿಸಿ: ಖಾಸಗಿ ಬಸ್ ಗಳೇ ಹೆಚ್ಚಾಗಿ ಓಡಾಡುವ ಕರಾವಳಿ ಜಿಲ್ಲೆಗಳಲ್ಲಿ ಸಾರಿಗೆ ನೌಕರರ ಮುಷ್ಕರದ ಬಿಸಿ ಅಷ್ಟಾಗಿ ತಟ್ಟಿಲ್ಲ. ಬುಧವಾರ ಹೊರಜಿಲ್ಲೆಗಳಿಗೆ ಹೋಗುವ ಕೆಲ ಪ್ರಯಾಣಿಕರು ಪರದಾಡಿದರೂ, ಖಾಸಗಿ ಬಸ್ ಗಳನ್ನು ಬಳಸಿದ್ದರಿಂದ ದೊಡ್ಡ ಮಟ್ಟದ ತೊಂದರೆ ಸಂಭವಿಸಿಲ್ಲ.

 

ಚಿಕ್ಕಮಗಳೂರಿನಲ್ಲೂ ಕೆಎಸ್‌ಆರ್ ಟಿಸಿ ಬಸ್ ನಿಲ್ದಾಣ ಬಸ್- ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿರುವ ದೃಶ್ಯ ಕಂಡುಬಂತು. ಕೆಎಸ್‌ಆರ್ ಟಿಸಿ ಬಸ್ ಸಂಚಾರ ಸ್ಥಗಿತ ಹಿನ್ನೆಲೆಯಲ್ಲಿ ಪ್ರಯಾಣಿಕರೂ ಬಸ್ ನಿಲ್ದಾಣದತ್ತಾ ಮುಖ ಮಾಡಿಲ್ಲ. ಖಾಸಗಿ ಬಸ್ ಗಳಿದ್ದರೂ ಜನರು ಅಷ್ಟಾಗಿ ಒಲವು ತೋರಿಲ್ಲ. ಹೀಗಾಗಿ ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳ ದರ್ಬಾರ್ ನಡೆಯುತ್ತಿದ್ದು, ಟಿಟಿ ವಾಹನ ಮುಂತಾದವುಗಳನ್ನು ಜನರು ಆಶ್ರಯಿಸಿದ್ದಾರೆ.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ