Breaking News

ಬೆಳಗಾವಿ ಸಬ ರಿಜಿಸ್ಟರ್ ಕಚೇರಿಯಲ್ಲಿ ಮತ್ತೆ ಲಂಚದ ಹಾವಳಿ ಸಂಕನ್ ಗೌಡ ಹಟಾವೋ ವಿಷ್ಣು ತೀರ್ಥ ಬುಲಾವೋ ಎಂದ ಜನತೆ

Spread the love

ಬೆಳಗಾವಿ: ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಖಂಡಿಸಿ ವಕೀಲರು ಸಬ್ ರಿಜಿಸ್ಟ್ರಾರ್ ಗೆ ಘೇರಾವ್ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ದುಡ್ಡು ಕೊಟ್ಟರೆ ಮಾತ್ರ ಜನಸಾಮಾನ್ಯರಿಗೆ ಕೆಲಸ ಮಾಡಿಕೊಡಲಾಗುತ್ತಿದೆ. ಏಜೆಂಟ್ ಗಳ ಹಾವಳಿ ಮಿತಿ ಮೀರಿದ್ದು, ಅಧಿಕಾರಿಗಳು ವಕೀಲರಿಗೂ ಕ್ಯಾರೇ ಎನ್ನುತ್ತಿಲ್ಲ. 5-50 ಸಾವಿರ ರೂಪಾಯಿವರೆಗೆ ಲಂಚ ಪಡೆಯುತ್ತಿದ್ದಾರೆ ಎಂದು ವಕೀಲರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಸದಾಗಿ ವಿವಾಹವಾಗುವ ಜೋಡಿಗಳಿಗೂ ರಜಿಸ್ಟರ್ ಮಾಡಿಕೊಳ್ಳಲು 5 ಸಾವಿರ ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ. ಯಾವುದೇ ಕೆಲಸ ಮಾಡಿಕೊಡಬೇಕು ಎಂದರೂ ಲಂಚ ಕೇಳುತ್ತಿದ್ದಾರೆ ಎಂದು ಆರೋಪಿಸಿ ಬೆಳಗಾವಿ ಬಾರ್ ಅಸೋಸಿಯೇಷನ್ ಪದಾಧಿಕಾರಿಗಳು ಸಬ್ ರಜಿಸ್ಟಾರ್ ಸಂಕನಗೌಡಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಅಲ್ಲದೇ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರು ಬೆಳಗಾವಿ ಸಬ್ ರಜಿಸ್ಟ್ರಾರ್ ಕಚೇರಿಯ ಕರ್ಮಕಾಂಡದ ಬಗ್ಗೆ ತನಿಖೆಗೆ ಆದೇಶಿಸಬೇಕು ಎಂದು ಆಗ್ರಹಿಸಿದರು.

 

 


Spread the love

About Laxminews 24x7

Check Also

ಬೆಳಗಾವಿ: ಒಂದೇ ವರ್ಷದಲ್ಲಿ ಅಪಘಾತಕ್ಕೆ 800 ಬಲಿ

Spread the loveಬೆಳಗಾವಿ: ಜಿಲ್ಲೆಯಲ್ಲಿ ಚಾಲಕರ ರ್ನಿಲಕ್ಷ$್ಯ ಮದ್ಯಸೇವನೆ ಮಾಡಿ ವಾಹನ ಚಲಾವಣೆ, ಅತಿಯಾದ ವೇಗ ಹೀಗೆ ವಿವಿಧ ಕಾರಣಗಳಿಂದ ರಸ್ತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ