Breaking News

ಸಂಡೆ ಲಾಕ್‍ಡೌನ್ ಹಿನ್ನೆಲೆ ಗ್ರಾಮಗಳತ್ತ ಹೊರಟ ಬೆಂಗ್ಳೂರಿಗರು……..

Spread the love

ಬೆಂಗಳೂರು: ಸಂಡೆ ಲಾಕ್‍ಡೌನ್ ಹಿನ್ನೆಲೆಯಲ್ಲಿ ಇಂದಿನಿಂದಲೇ ಜನರು ತಮ್ಮ ತಮ್ಮ ಸ್ವ ಗ್ರಾಮಗಳತ್ತ ಹೋಗುತ್ತಿದ್ದಾರೆ.

ಇಂದು ರಾತ್ರಿ 9 ಗಂಟೆಯಿಂದ ಸಂಡೆ ಲಾಕ್‍ಡೌನ್ ಜಾರಿಯಾಗಲಿದೆ. ಹೀಗಾಗಿ ಬೆಂಗಳೂರಿಗರು ತುಮಕೂರು ರಸ್ತೆ ನವಯುಗ ಟೋಲ್ ಮುಖಾಂತರ ಜನರು ತಮ್ಮ ತಮ್ಮ ಗ್ರಾಮಗಳತ್ತ ಪ್ರಯಾಣ ಮಾಡುತ್ತಿದ್ದಾರೆ. ಹೀಗಾಗಿ ನವಯುಗ ಟೋಲ್ ಬಳಿ ವಾಹನ ದಟ್ಟಣೆ ಹೆಚ್ಚಾಗಿದೆ.ಕಳೆದ ಲಾಕ್‍ಡೌನ್ ವೇಳೆಯಲ್ಲೂ ಬೆಂಗಳೂರು ಬಿಟ್ಟು ಸಾವಿರಾರು ಜನರು ಹೋಗುತ್ತಿದ್ದರು. ಇಂದು ಕೂಡ ಕಾರು, ಬೈಕ್‍ಗಳ ಮೂಲಕ ಊರಿಗೆ ಹೋಗುತ್ತಿದ್ದಾರೆ. ಕೆಲವರು ಮನೆಯಲ್ಲಿರುವ ಪೀಠೋಪಕರಣಗಳ ಜೊತೆಗೆ ಬೆಂಗಳೂರು ಬಿಟ್ಟು ಹೋಗುತ್ತಿದ್ದಾರೆ. ಇದರಿಂದ ಟೋಲ್ ಬಳಿ ಟ್ರಾಫಿಕ್ ಉಂಟಾಗುತ್ತಿದೆ.

ಕಳೆದ ಲಾಕ್‍ಡೌನ್ ವೇಳೆಯಲ್ಲೂ ಬೆಂಗಳೂರು ಬಿಟ್ಟು ಸಾವಿರಾರು ಜನರು ಹೋಗುತ್ತಿದ್ದರು. ಇಂದು ಕೂಡ ಕಾರು, ಬೈಕ್‍ಗಳ ಮೂಲಕ ಊರಿಗೆ ಹೋಗುತ್ತಿದ್ದಾರೆ. ಕೆಲವರು ಮನೆಯಲ್ಲಿರುವ ಪೀಠೋಪಕರಣಗಳ ಜೊತೆಗೆ ಬೆಂಗಳೂರು ಬಿಟ್ಟು ಹೋಗುತ್ತಿದ್ದಾರೆ. ಇದರಿಂದ ಟೋಲ್ ಬಳಿ ಟ್ರಾಫಿಕ್ ಉಂಟಾಗುತ್ತಿದೆ.

ಒಂದು ವಾರದ ಲಾಕ್‍ಡೌನ್ ಬಳಿಕ ಪ್ರತಿ ಭಾನುವಾರ ಲಾಕ್‍ಡೌನ್ ಮಾಡುವಂತೆ ಸರ್ಕಾರ ಸೂಚಿಸಿತ್ತು. ಹೀಗಾಗಿ ಸರ್ಕಾರದ ಮಾರ್ಗಸೂಚಿಯಂತೆ ಸಂಡೆ ಲಾಕ್‍ಡೌನ್‍ಗೆ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಆದ್ದರಿಂದ ಇಂದು ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ ಮುಂಜಾನೆ 5 ಗಂಟೆಯ ತನಕ ನಗರದ ಎಲ್ಲಾ ಪ್ರಮುಖ ರಸ್ತೆಗಳು ಬಂದ್ ಆಗಲಿವೆ.


Spread the love

About Laxminews 24x7

Check Also

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ ಬದಲಾವಣೆ ನಿರ್ಧಾರ: ಡಿ.ಕೆ ಶಿವಕುಮಾರ್

Spread the loveಬೆಂಗಳೂರು: ರಾಜ್ಯದಲ್ಲಿ ಇರೋ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ  ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ