Breaking News

ರೌಡಿಯೇ ಬೇಕೆಂದು ತಾಳಿ ಕಟ್ಟಿಸಿಕೊಂಡ್ಳು – ಮದ್ವೆ ಬಳಿಕ ಮತ್ತೊಬ್ಬನೊಂದಿಗೆ ಮಂಚ ಏರಿದ್ಳು!

Spread the love

ಮಂಡ್ಯ: ಆಕೆಗೆ ರೌಡಿ ಶೀಟರ್ ಜೊತೆ ಲವ್ ಆಗಿತ್ತು. ಹೆತ್ತವರು ವಿರೋಧ ಮಾಡಿದ್ರಿಂದ ಮನೆ ಬಿಟ್ಟೋಗಿ ಮದುವೆಯಾಗಿದ್ದ ಆಕೆಗೆ 8 ವರ್ಷದ ಗಂಡು ಮಗುವೂ ಇತ್ತು. ಈ ನಡುವೆ ಗಂಡನ ಸ್ನೇಹಿತನೊಂದಿಗೆ ಅನೈತಿಕ ಸಂಬಂಧ ಬೆಳೆಸಿದ್ದಳು. ಮೊದಲೇ ಆಕೆಯ ಬಗ್ಗೆ ಸಂಶಯಗೊಂಡಿದ್ದ ಗಂಡನಿಗೆ ರೆಡ್ ಹ್ಯಾಂಡ್ ಆಗಿ ಪ್ರಿಯಕರನೊಂದಿಗೆ ಸಿಕ್ಕಿಬಿದ್ದಿದ್ದು, ಪ್ರಿಯಕರನ ಬುರುಡೆಯನ್ನು ಗಂಡ ಬಿಚ್ಚಿದ್ದಾನೆ.

ಮಂಡ್ಯ ತಾಲೂಕಿನ ಇಂಡುವಾಳು ಗ್ರಾಮ ಹರ್ಷಿತಾ ಶಾಲೆಯಲ್ಲಿ ಓದುವಾಗಲೇ ರೌಡಿ ಶೀಟರ್ ನಾಗೇಂದ್ರ ಅಲಿಯಾಸ್ ಕುಳ್ಳನಾಗ ಎಂಬಾತನ ಪ್ರೀತಯ ಬಲೆಗೆ ಬಿದ್ದಿದ್ದಳು. ಸುಮಾರು 6 ವರ್ಷ ಪ್ರೀತಿಯಲ್ಲಿ ತೇಲಾಡಿದ್ದ ಆ ಜೋಡಿಯ ಮದುವೆಗೆ ಹೆತ್ತವರು ವಿರೋಧ ವ್ಯಕ್ತಪಡಿಸಿದ್ರು. ಬಳಿಕ ಮನೆ ಬಿಟ್ಟೋಗಿ ಮದುವೆಯಾಗಿದ್ರು. ಆರಂಭದಲ್ಲಿ ಲೈಫು ಚೆನ್ನಾಗಿಯೇ ಇದ್ದ ಈ ಜೋಡಿಗೆ ಓರ್ವ ಮಗನೂ ಇದ್ದಾನೆ.

ಹೀಗಿದ್ದ ಸಂಸಾರದಲ್ಲಿ ಮತ್ತೋರ್ವನ ಎಂಟ್ರಿ ಆಗುತ್ತೆ. ಅವನೇ ಮಂಡ್ಯದ ಶಂಕರಮಠ ಬಡಾವಣೆಯ ನಿವಾಸಿ ಚೇತನ್. ಅಂದಹಾಗೆ ಚೇತನ್, ಹರ್ಷಿತಾ ಪತಿ ಕುಳ್ಳನಾಗನ ಸ್ನೇಹಿತ. ಓಡಿ ಬಂದಾಗ ಸಹಾಯ ಮಾಡಿದ್ದ ಈತ, ಕ್ರಮೇಣ ಹರ್ಷಿತಾ ಜೊತೆಗೆ ಅನೈತಿಕ ಸಂಬಂಧ ಬೆಳೆಸಿದ್ದ. ಈ ವಿಚಾರ ನಾಗನಿಗೆ ತಿಳಿದು ಹರ್ಷಿತಾ ಜೊತೆ ಜಗಳ ಸಹ ಆಗಿತ್ತು. ಅಲ್ಲದೆ 2018ರಲ್ಲಿ ಚೇತನ್ ಮೇಲೆ ಮಾರಕಾಸ್ತ್ರಗಳಿಂದ ಹಲೆ ಮಾಡಿದ್ದ ನಾಗ ಒಂದು ವರ್ಷ ಜೈಲಿನಲ್ಲೂ ಇದ್ದ.

ಇಷ್ಟಾದರೂ ಚೇತನ್ ಹಾಗೂ ಹರ್ಷಿತಾ ಲವ್ವಿಡವ್ವಿ ಬಿಟ್ಟಿರಲಿಲ್ಲ. ಏಪ್ರಿಲ್ 4ನೇ ತಾರೀಕು ಹರ್ಷಿತಾ ಮನೆಗೆ ಚೇತನ್ ಬಂದಿದ್ದ. ಈ ವೇಳೆ ಮನೆಗೆ ಬಂದ ಕುಳ್ಳ ನಾಗನಿಗೆ ಇಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ರು. ಇದ್ರಿಂದ ಕೋಪಗೊಂಡ ಕುಳ್ಳನಾಗ ತನ್ನ ಸ್ನೇಹಿತ ಯೋಗೇಶ್ ಜೊತೆ ಸೇರಿ ಚೇತನ್‍ಗೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಹೆಂಡತಿ ಮೇಲೂ ಹಲ್ಲೆ ನಡೆಸಿದ್ದು, ಅಷ್ಟರಲ್ಲಿ ಸ್ಥಳಕ್ಕಾಗಮಿಸಿದ ಪೊಲೀಸರು ಹಲ್ಲೆ ಮಾಡುವುದನ್ನು ನಿಲ್ಲಿಸಿದ್ದಾರೆ.

ಘಟನೆ ಸಂಬಂಧ ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಗಂಭೀರವಾಗಿ ಗಾಯಗೊಂಡಿರೊ ಚೇತನ್ ಚಿಕಿತ್ಸೆ ಪಡೆಯುತ್ತಿದ್ದಾನೆ. ಇತ್ತ ಹಲ್ಲೆ ನಡೆಸಿದ ಕುಳ್ಳನಾಗ ಹಾಗೂ ಆತನ ಸ್ನೇಹಿತ ಯೋಗೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ