Breaking News

ಸಾರಿಗೆ ನೌಕರರ ಕಷ್ಟ ಬಿಜೆಪಿಗೆ ಗೊತ್ತಾಗುತ್ತಿಲ್ಲ: ಕುಮಾರಸ್ವಾಮಿ

Spread the love

ಬಸವಕಲ್ಯಾಣ (ಬೀದರ್‌ ಜಿಲ್ಲೆ): ‘ಬಿಜೆಪಿ ಮುಖಂಡರ ಚಿಂತನೆಗಳೇ ಬೇರೆ ಇವೆ. ಅವರಿಗೆ ಸಾರ್ವಜನಿಕರ ಸಮಸ್ಯೆಗೆ ಪರಿಹಾರ ಬೇಕಾಗಿಲ್ಲ. ಹೀಗಾಗಿ ಸಾರಿಗೆ ನೌಕರರ ಕಷ್ಟ ಬಿಜೆಪಿಗೆ ಗೊತ್ತಾಗುತ್ತಿಲ್ಲ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

‘ಕುತಂತ್ರದ ಮೂಲಕ ಹಣ ಉಪಯೋಗ ಮಾಡಿ ಸರ್ಕಾರ ರಚಿಸಿದರು. ಈಗ ಆ ಹಣ ಹೇಗೆ ಸಂಪಾದನೆ ಮಾಡಬೇಕು, ಕಿಸೆ ತುಂಬಿಸಿಕೊಳ್ಳಬೇಕು ಎನ್ನುವ ವಿಚಾರದಲ್ಲಿದ್ದಾರೆ’ ಎಂದು ಮುಖಂಡರ ಹೆಸರು ಪ್ರಸ್ತಾಪ ಮಾಡದೆ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಎದುರು ಅಸಮಾಧಾನ ಹೊರಹಾಕಿದರು.

‘ನಾನು 14 ತಿಂಗಳು ಮೈತ್ರಿ ಸರ್ಕಾರದ ನಾಯಕತ್ವ ವಹಿಸಿದ್ದಾಗ ಯಾರೂ ಬೀದಿಗೆ ಇಳಿದು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿಲ್ಲ. 2018 ಹಾಗೂ 2006ರಲ್ಲಿ ಇಂತಹ ಪ್ರತಿಭಟನೆಗಳು ನಡೆದಿಲ್ಲ. ಅದಕ್ಕೆ ನಾನು ಅವಕಾಶವನ್ನೂ ಕೊಟ್ಟಿರಲಿಲ್ಲ’ ಎಂದು ಹೇಳಿದರು.

‘ಮೈತ್ರಿ ಸರ್ಕಾರದ ಅವಧಿಯಲ್ಲಿ ಸಮಸ್ಯೆ ಉದ್ಭವಿಸಿಲ್ಲ. ಬಿಜೆಪಿ ಸರ್ಕಾರದಲ್ಲಿ ಸಮಸ್ಯೆ ಉದ್ಭವವಾಗಿದೆ. ಅದನ್ನು ಅವರೇ ಬಗೆಹರಿಸಬೇಕು. ಯೋಚನೆ ಮಾಡಿ ತೀರ್ಮಾನ ಕೈಗೊಳ್ಳಬೇಕು. ಅದನ್ನು ಬಿಟ್ಟು ಹಿಂದಿನ ಸರ್ಕಾರದ ಬಗ್ಗೆ ಮಾತನಾಡುವುದು ಸರಿಯಲ್ಲ. ಮಾಹಿತಿ ತರಿಸಿಕೊಂಡು ಲಕ್ಷ್ಮಣ ಸವದಿ ಮಾತನಾಡುವುದು ಸೂಕ್ತ’ ಎಂದರು.

‘ಬಿಜೆಪಿಯವರು ಅಭಿವೃದ್ಧಿಯಿಂದ ಜಯ ಸಾಧಿಸಿಲ್ಲ. ವೈಯಕ್ತಿಕವಾಗಿ ಹಣ ಲೂಟಿ ಮಾಡಿ ಅಭಿವೃದ್ಧಿ ಕಂಡಿದ್ದಾರೆ. ಹಣ ಚೆಲ್ಲಿ ಚುನಾವಣೆಯಲ್ಲಿ ಗೆಲ್ಲಬಹುದು ಎನ್ನುವ ನಿರೀಕ್ಷೆಯಲ್ಲಿದ್ದಾರೆ. ಜನರನ್ನು ಹಣದಿಂದ ಸದಾ ಕಾಲ ಮರಳು ಮಾಡಲು ಸಾಧ್ಯವಿಲ್ಲ’ ಎಂದರು ಹೇಳಿದರು.

‘ದೇವೇಗೌಡರು ಉತ್ತರ ಕರ್ನಾಟಕಕ್ಕೆ ಕಲ್ಪಿಸಿದ ನೀರಾವರಿ ಯೋಜನೆ ಹಾಗೂ ನಾನು ಮುಖ್ಯಮಂತ್ರಿಯಾಗಿದ್ದಾಗ ಕೊಟ್ಟಿರುವ ಯೋಜನೆಗಳನ್ನು ಜನ ಮರೆತಿಲ್ಲ. ಮುಸ್ಲಿಮರಿಗೆ ಶೇಕಡ 4 ರಷ್ಟು ಮೀಸಲಾತಿ ಕೊಡಲಾಗಿತ್ತು. ಒಟ್ಟಾರೆಯಾಗಿ ಮತದಾರರು ನಮ್ಮ ಪರವಾಗಿದ್ದಾರೆ’ ಎಂದು ತಿಳಿಸಿದರು.


Spread the love

About Laxminews 24x7

Check Also

ಗಣೇಶೋತ್ಸವದ ಹಿನ್ನಲ್ಲೆಯಲ್ಲಿ ಬೆಳಗಾವಿಯಲ್ಲಿ ಭಾರಿ ವಾಗನಗಳ ಮಾರ್ಗ ಬದಲಾವಣೆ ಮಾಡಿದ ನಗರ ಪೊಲೀಸರು….

Spread the love ಗಣೇಶೋತ್ಸವದ ಹಿನ್ನಲ್ಲೆಯಲ್ಲಿ ಬೆಳಗಾವಿಯಲ್ಲಿ ಭಾರಿ ವಾಗನಗಳ ಮಾರ್ಗ ಬದಲಾವಣೆ ಮಾಡಿದ ನಗರ ಪೊಲೀಸರು…. ಅದ್ದೂರಿ ಗಣೇಶೋತ್ಸವಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ