Breaking News

ಶಾಸಕ ಯತ್ನಾಳ್‌ ಶೀಘ್ರದಲ್ಲಿ ಬಿಜೆಪಿಯಿಂದ ‘ಉಚ್ಛಾಟನೆ’ : ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್

Spread the love

ಬೆಳಗಾವಿ : ಬಿಜೆಪಿಯಲ್ಲಿ ಇದ್ದುಕೊಂಡು ಶಾಸಕರಾಗಿ ಆಯ್ಕೆಯಾಗಿರುವ ಶಾಸಕ ಬಸನಗೌಡ ಯತ್ನಾಳ್‌ ಅವರು ತಮ್ಮದೇ ಪಕ್ಷದ ನಾಯಕರ ವಿರುದ್ದ ಕಿಡಿಕಾರುತ್ತಿರುವುದು ಈಗ ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿದ್ದು, ಬಹಿರಂಗವಾಗಿಯೇ ಯತ್ನಾಳು ಅವರು ಸಿಎಂ ಸೇರಿದಂತೆ ನಾನಾ ಮಂದಿಯ ವಿರುದ್ದ ಕಿಡಿಕಾರುತ್ತಿದ್ದಾರೆ.

ಈ ನಡುವೆ ಶಾಸಕ ಯತ್ನಾಳ್‌ ಶೀಘ್ರದಲ್ಲಿ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗುವುದು ಅಂತ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಆ ವ್ಯಕ್ತಿ ಬಗ್ಗೆ ನಾನು ಮಾತನಾಡುವುದಿಲ್ಲ, ಹೆಚ್ಚು ಮಾತನಾಡಿದ್ರೇ, ಅವರಿಗೆ ಹೆಚ್ಚು ಪ್ರಚಾರ ಸಿಗುತ್ತದೆ ಅಂಥ ಹೇಳಿದರು. ಇನ್ನೂ ಇದೇ ವೇಳೆ ಮಾತನಾಡುತ್ತ ಪಕ್ಷದ ಮೇಲೆ ಅವರಿಗೆ 00.1 ಪರ್ಸೆಂಟ್‌ ಕೂಡ ನಂಬಿಕೆ ಇಲ್ಲ ಅಂತ ಹೇಳಿದ್ರು. ಇದೇ ವೇಳೆ ಅವರು ಯತ್ನಾಳ್ ಅವರನ್ನು ಬಿಜೆಪಿಯಿಂದ ಹೊರಹಾಕಲಾಗುವುದು ಅಂತ ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ