Breaking News
Home / ರಾಜ್ಯ / 1200 ಕೋಟಿ ಅನುದಾನವನ್ನು KSRTCಗೆ ನೀಡಲಾಗಿದೆ : ಅಶ್ವತ್ಥ್ ನಾರಾಯಣ್

1200 ಕೋಟಿ ಅನುದಾನವನ್ನು KSRTCಗೆ ನೀಡಲಾಗಿದೆ : ಅಶ್ವತ್ಥ್ ನಾರಾಯಣ್

Spread the love

ಮಂಗಳೂರು : ಸಾರಿಗೆ ನೌಕರರ ಸಂಬಳದ ವಿಚಾರವನ್ನು ಸ್ವಾಯತ್ತ ಸಂಸ್ಥೆಗಳಿಗೆ ಬಿಡಲಾಗಿದೆ. ಅವರ ಹಣಕಾಸಿನ ಪರಿಸ್ಥಿತಿಗೆ ಅನುಗುಣವಾಗಿ ಸಂಬಳಗಳು ನಿಗದಿಯಾಗಲಿದೆ ಎಂದು ಶುಕ್ರವಾರ ಮಂಗಳೂರಿನಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಾರಿಗೆ ನೌಕರರಿಗೆ ಸರ್ಕಾರ ಈಗಾಗಲೇ ಸಾಕಷ್ಟು ಅನುದಾನವನ್ನ ಬಿಡುಗಡೆ ಮಾಡಿದೆ. 1200 ಕೋಟಿ ಅನುದಾನವನ್ನು KSRTCಗೆ ನೀಡಲಾಗಿದೆ. ಕೋವಿಡ್ ಸಮಯದಲ್ಲಿ ಸಾರಿಗೆ ಸಂಸ್ಥೆಗಳಿಗೆ ತುಂಬಾ ನಷ್ಟವಾಗಿದೆ. ಇದರ ನಡುವೆ ಸಾರಿಗೆ ನೌಕರರ ಬೇಡಿಕೆಗಳನ್ನು ಸಂಪೂರ್ಣವಾಗಿ ಈಡೇರಿಸಲು ಸಾಧ್ಯವಾಗುವುದಿಲ್ಲ ಎಂದು ಡಿಸಿಎಂ ಸ್ಪಷ್ಟಪಡಿಸಿದರು.

ಆರನೇ ವೇತನ ಆಯೋಗದ ಶಿಫಾರನ್ನು ಹೊರತುಪಡಿಸಿ ಉಳಿದ 8 ಬೇಡಿಕೆಗಳನ್ನು ಸರ್ಕಾರ ಈಡೇರಿಸಿದೆ ಎಂದರು. ಇದೇ ವೇಳೆ ಬಸನಗೌಡ ಯತ್ನಾಳ್ ಅವರ ಸಿಎಂ ಬದಲಾವಣೆ ಹೇಳಿಕೆ ಬಗ್ಗೆ ಮಾತನಾಡಿದ್ದು, ಸಿಎಂ ಯಾವುದೇ ಕಾರಣಕ್ಕೂ ಬದಲಾವಣೆ ಇಲ್ಲ. ಯಡಿಯೂರಪ್ಪನವರೇ ಮುಂದುವರೆಯುತ್ತಾರೆ ಎಂದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ