Breaking News

ಬೆಳಗಾವಿ ವಿಚಾರದಲ್ಲಿನ ಶಿವಸೇನೆ ಹೇಳಿಕೆಗೆ ಕಾಂಗ್ರೆಸ್‌ ನಿಲುವೇನು?: ಬಿಜೆಪಿ

Spread the love

ಬೆಂಗಳೂರು: ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ಶಿವಸೇನೆಯ ಹೇಳಿಕೆ ವಿಚಾರದಲ್ಲಿ ಕಾಂಗ್ರೆಸ್‌ ಪಕ್ಷದ ನಿಲುವು ಏನು ಎಂದು ಬಿಜೆಪಿ ರಾಜ್ಯ ಘಟಕ ಟ್ವಿಟರ್‌ನಲ್ಲಿ ಪ್ರಶ್ನಿಸಿದೆ.

‘ಬೆಳಗಾವಿಯು ಕರ್ನಾಟಕ ಆಕ್ರಮಿತ ಮಹಾರಾಷ್ಟ್ರ’ ಎಂಬ ಅಲ್ಲಿನ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಹೇಳಿಕೆ ಕುರಿತು ಶುಕ್ರವಾರ ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ ರಾಜ್ಯ ಘಟಕ, ‘ಪಕ್ಕದ ರಾಜ್ಯದಲ್ಲಿ ಶಿವಸೇನೆ ಮತ್ತು ಕಾಂಗ್ರೆಸ್‌ ಮೈತ್ರಿಯಲ್ಲಿವೆ. ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಚುನಾವಣೆ ಪ್ರಚಾರ ನಡೆಸುತ್ತಿದ್ದಾರೆ. ಶಿವಸೇನೆ ಹೇಳಿಕೆ ಕುರಿತು ತಮ್ಮ ನಿಲುವು ತಿಳಿಸಲಿ’ ಎಂದು ಆಗ್ರಹಿಸಿದೆ.

‘ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಲಿ ಎಂದು ಕಾಂಗ್ರೆಸ್‌ನ ಮಿತ್ರಪಕ್ಷವನ್ನು ಪ್ರತಿನಿಧಿಸುವ ಮುಖ್ಯಮಂತ್ರಿಯೇ ಹೇಳಿದ್ದಾರೆ. ಈ ಬಗ್ಗೆ ಕಾಂಗ್ರೆಸ್‌ ನಾಯಕರು ಧ್ವನಿ ಎತ್ತದೆ ಅಲ್ಲಿನ ಸರ್ಕಾರದ ಜತೆ ಹೊಂದಾಣಿಕೆ ರಾಜಕಾರಣ ಮಾಡುತ್ತಿರುವುದೇಕೆ? ಬೆಳಗಾವಿ ನಮ್ಮದು ಎಂದು ಸಂಸತ್ತಿನಲ್ಲೇ ಹೇಳಿದ ಶಿವಸೇನೆ ಜತೆ ಕಾಂಗ್ರೆಸ್‌ ಮೈತ್ರಿಯಲ್ಲಿದೆ. ಶಿವಸೇನೆ ಸಂಸದನ ಮಾತನ್ನು ಕೆಪಿಸಿಸಿ ಅಧ್ಯಕ್ಷರು ವಿರೋಧಿಸುತ್ತಾರಾ? ಪುರಸ್ಕರಿಸುತ್ತಾರಾ?’ ಎಂದು ಬಿಜೆಪಿ ಕೇಳಿದೆ.


Spread the love

About Laxminews 24x7

Check Also

ಗುತ್ತಿಗೆದಾರರಿಗೆ 38 ಸಾವಿರ ಕೋಟಿ ಬಾಕಿ, ಒಂದು ವಾರ ಕೆಲಸ ನಿಲ್ಲಿಸಿ ಪ್ರತಿಭಟನೆ: ಮಂಜುನಾಥ್ ಎಚ್ಚರಿಕೆ

Spread the loveಬೆಂಗಳೂರು: ಗುತ್ತಿಗೆದಾರರಿಗೆ  38 ಸಾವಿರ ಕೋಟಿ ಬಾಕಿ ಇದೆ. ಸರ್ಕಾರ ನಮ್ಮ ಸಮಸ್ಯೆ ಬಗೆಹರಿಸಿಲ್ಲ. ಮಾ.5 ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ