ರಾಯಚೂರು: ಕೃಷ್ಣಭಾಗ್ಯ ಜಲನಿಗಮದ ನಂದವಾಡಗಿ ಏತ ನೀರಾವರಿ ಯೋಜನೆಯ ಹನಿ ನೀರಾವರಿ ಕಾಮಗಾರಿಗಳ ಚಾಲನೆಗಾಗಿ ಭೂಮಿ ಪೂಜೆ ಕಾರ್ಯಕ್ರಮವನ್ನು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಬುಧವಾರದಂದು ಮಸ್ಕಿ ತಾಲೂಕಿನ ಬುದ್ದಿಮೆಯಲ್ಲಿ ನೇರವೇರಿಸಿದರು.
ಈ ಸಂದರ್ಭದಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ, ಸಂಗಣ್ಣ ಕರಡಿ, ಶಾಸಕ ರಾಜುಗೌಡ, ಡಾ.ಶಿವರಾಜ್ ಪಾಟೀಲ್, ಪ್ರತಾಪ್ ಗೌಡ ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.