Breaking News

ಸೈಯದ್‌ ಗ್ರಂಥಾಲಯಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳನ್ನು ಬಂಧಿಸಿ: ಸಿದ್ದರಾಮಯ್ಯ ಆಗ್ರಹ

Spread the love

ಮೈಸೂರು: ಸೈಯದ್‌ ಇಸಾಕ್‌ ಅವರ ಸಾರ್ವಜನಿಕ ಗ್ರಂಥಾಲಯಕ್ಕೆ ಬೆಂಕಿ ಇಟ್ಟು ಸಾವಿರಾರು ಪುಸ್ತಕಗಳನ್ನು ನಾಶ ಮಾಡಿದ ದುಷ್ಕರ್ಮಿಗಳ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿ ಪ್ರತಿಕ್ರಿಯಿಸಿರುವ ಅವರು, ʻಮೈಸೂರಿನ ಅಕ್ಷರ ಪ್ರೇಮಿ ಸೈಯದ್ ಇಸಾಕ್ ಅವರು ಕಷ್ಟಪಟ್ಟು ಕಟ್ಟಿ ನಡೆಸುತ್ತಿದ್ದ ಸಾರ್ವಜನಿಕ ಗ್ರಂಥಾಲಯವನ್ನು ಸುಟ್ಟುಹಾಕಿರುವುದು ಹೇಯಕೃತ್ಯ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಈ ಅಕ್ಷರವಿರೋಧಿ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಲು ಕ್ರಮ ಕೈಗೊಳ್ಳುವದರ ಜೊತೆಗೆ ಸೈಯದ್ ಅವರಿಗೆ ಸೂಕ್ತ ಪರಿಹಾರವನ್ನೂ ನೀಡಬೇಕುʼ ಎಂದು ಒತ್ತಾಯಿಸಿದ್ದಾರೆ.

ಸೈಯದ್‌ ಅವರ ಪರವಾಗಿ ಮಾಜಿ ಸಚಿವರಾದ ಎಚ್.ಸಿ.ಮಹದೇವಪ್ಪ, ಎಚ್.ನಾಗೇಶ್‌ ದನಿ ಎತ್ತಿದ್ದಾರೆ.


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ