Breaking News

ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಸಮಾಜದ ವತಿಯಿಂದ ‘ಪಂಚಅಶ್ವ’ ಎಂಬ ಕುದುರೆಯನ್ನು ಶುಕ್ರವಾರ ಕೊಡುಗೆ ನೀಡಲಾಯಿತು.

Spread the love

ಬೈಲಹೊಂಗಲ: ಲಿಂಗಾಯತ ಪಂಚಮಸಾಲಿ ಸಮಾಜದ ಮೀಸಲಾತಿ ಹೋರಾಟದಲ್ಲಿ ಪ್ರಮುಖರಾಗಿ ಗುರುತಿಸಿಕೊಂಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಸಮಾಜದ ವತಿಯಿಂದ ‘ಪಂಚಅಶ್ವ’ ಎಂಬ ಕುದುರೆಯನ್ನು ಶುಕ್ರವಾರ ಕೊಡುಗೆ ನೀಡಲಾಯಿತು.

ಪಟ್ಟಣದ ವೀರರಾಣಿ ಕಿತ್ತೂರು ಚನ್ನಮ್ಮನ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಯತ್ನಾಳ್ ಹಾಗೂ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಚನ್ನಮ್ಮನ ಪುತ್ಥಳಿಗೆ ಪುಷ್ಪ ಮಾಲೆ ಹಾಕಿ ಕೇಸರಿ ತಿಲಕ ಹಚ್ಚಿಕೊಂಡು ಬಿಳಿ ಬಣ್ಣದ ಕುದುರೆ ಏರಿದ ಯತ್ನಾಳ, ‘ಜೈ ಪಂಚಮಸಾಲಿ, ಜೈ ಚನ್ನಮ್ಮ’ ಎಂದು ಘೋಷಣೆ ಹಾಕಿದರು.

ಕುದುರೆ ದಾನಿಗಳಾದ ಮಲ್ಲಪ್ಪ ಅಂಗಡಿ, ಗೌಡಪ್ಪ ಪಾಟೀಲ, ಸಮಾಜ ಮುಖಂಡರಾದ ವೀಣಾ ಕಾಶಪ್ಪನವರ, ಶ್ರೀಶೈಲ ಬೋಳನ್ನವರ, ಮುರುಗೇಶ ಗುಂಡ್ಲೂರ, ಮಹೇಶ ಹರಕುಣಿ, ಮಹಾಂತೇಶ ಮತ್ತಿಕೊಪ್ಪ, ರಾಜಶೇಖರ ಮೂಗಿ, ಎಫ್.ಎಸ್.ಸಿದ್ಧನಗೌಡರ, ಉಮೇಶ ಬೋಳೆತ್ತಿನ, ಮಹೇಶ ಕೋಟಗಿ, ಶ್ರೀಶೈಲ ಶರಣಪ್ಪನವರ, ಗಂಗಪ್ಪ ಗುಗ್ಗರಿ ಇದ್ದರು


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ