Breaking News
Home / ಜಿಲ್ಲೆ / ಬೆಂಗಳೂರು / ಅನುಕಂಪದ ನೌಕರಿ ನಿಯಮ ತಿದ್ದುಪಡಿಗೆ ಅಧಿಸೂಚನೆ: ಏನಿದೆ ಹೊಸ ನಿಯಮದಲ್ಲಿ?

ಅನುಕಂಪದ ನೌಕರಿ ನಿಯಮ ತಿದ್ದುಪಡಿಗೆ ಅಧಿಸೂಚನೆ: ಏನಿದೆ ಹೊಸ ನಿಯಮದಲ್ಲಿ?

Spread the love

ಬೆಂಗಳೂರು: ಸರ್ಕಾರಿ ಹುದ್ದೆಯಲ್ಲಿದ್ದವರು ಮೃತಪಟ್ಟರೆ, ಅನುಕಂಪದ ಆಧಾರದಲ್ಲಿ ಅವಲಂಬಿತರಿಗೆ ಸರ್ಕಾರಿ ಹುದ್ದೆಗೆ ನೇಮಕಾತಿ ಮಾಡಿಕೊಳ್ಳುವ ಕುರಿತಂತೆ ಕರ್ನಾಟಕ ನಾಗರಿಕ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳಿಗೆ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ತಿದ್ದುಪಡಿ ನಿಯಮದ ಪ್ರಕಾರ, ಸರ್ಕಾರಿ ನೌಕರ ಮೃತಪಟ್ಟರೆ ಆತನ ಜೊತೆ ವಾಸವಿದ್ದ ವಿಧವಾ ಪತ್ನಿ ಅನುಕಂಪದ ಆಧಾರದಲ್ಲಿ ಹುದ್ದೆ ಪಡೆಯಲು ಅರ್ಹರಾಗುತ್ತಾರೆ. ನೇಮಕಾತಿಗೆ ಆಕೆಗೆ ಅರ್ಹತೆ ಇಲ್ಲದಿದ್ದರೆ ಅಥವಾ ನೇಮಕಾತಿ ಬಯಸದೇ ಇದ್ದರೆ ಆಕೆ ಆಯ್ಕೆ ಮಾಡಿದ ಮಗ ಅಥವಾ ಮಗಳು ಹುದ್ದೆ ಪಡೆಯಲು ಅರ್ಹರಾಗುತ್ತಾರೆ.

ವಿವಾಹಿತ ಮಹಿಳಾ ನೌಕರರು ಮೃತಪಟ್ಟರೆ ಆಕೆಯ ವಿಧುರ ಪತಿಯು ಆಯ್ಕೆ ಮಾಡಿದ ಮಗ ಅಥವಾ ಮಗಳು ಅಥವಾ ಮೃತಳ ಅವಲಂಬಿತ ಮಗ, ಮಗಳು ಅರ್ಹರಿಲ್ಲದಿದ್ದರೆ ಅಥವಾ ನೇಮಕಾತಿ ಬಯಸದೇ ಇದ್ದರೆ, ವಿಧುರ ಪತಿಯನ್ನು ಹುದ್ದೆಗೆ ಪರಿಗಣಿಸಬಹುದು. ಪತಿ ಮೊದಲೇ ಮೃತಪಟ್ಟಿದ್ದರೆ, ಮಕ್ಕಳ ವಯಸ್ಸಿಗೆ ಅನುಗುಣವಾಗಿ ಹುದ್ದೆ ನೀಡಬೇಕು ಎಂದೂ ನಿಯಮ ತಿದ್ದುಪಡಿ ಮಾಡಲಾಗಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ