Breaking News
Home / Uncategorized / ಸತೀಶ್ ಜಾರಕಿಹೊಳಿ ಅವರನ್ನು ಲೋಕಸಭೆಗೆ ಪ್ರಚಂಡ ಬಹುಮತಗಳಿಂದ ಆರಿಸಿ ತರೋಣ​: ಎಂದು ಹೇಬ್ಬಾಳಕರ್

ಸತೀಶ್ ಜಾರಕಿಹೊಳಿ ಅವರನ್ನು ಲೋಕಸಭೆಗೆ ಪ್ರಚಂಡ ಬಹುಮತಗಳಿಂದ ಆರಿಸಿ ತರೋಣ​: ಎಂದು ಹೇಬ್ಬಾಳಕರ್

Spread the love

ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ತುರಮರಿ ಗ್ರಾಮದ ವಿವಿಧ ಸಂಘಟನೆಗಳ ಜೊತೆ ಬೆಳಗಾವಿ ಚುನಾವಣೆಯ ಪ್ರಯುಕ್ತ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿಯವರ ಪರ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಭಾನುವಾರ ಪ್ರಚಾರ ನಡೆಸಿದರು.
ದೇಶದ​ ಈ‌ಗಿನ ಪರಿಸ್ಥಿತಿಯಲ್ಲಿ ಜನ ಸಾಮಾನ್ಯರ ಬಗ್ಗೆ ರಾಜ್ಯ ಹಾಗೂ​ ಕೇಂದ್ರದ​ ಬಿಜೆಪಿ ಸರ್ಕಾರಗಳಿಗೆ ಕಿಂಚಿ​ತ್ತೂ​ ಕಾಳಜಿ‌ ಇ​ಲ್ಲ. ಪ್ರತಿಯೊಬ್ಬರೂ ಮತ​ದ ಮೂಲಕ​ ​ಈ ಸರಕಾರಗಳಿಗೆ ತಕ್ಕ ಉತ್ತರ ನೀಡಬೇಕಿದೆ. ಈ ಸರ್ಕಾರಗಳು ಅಚ್ಛೇ ದಿ​ನ್ ಎನ್ನುತ್ತ ತಮ್ಮ  ಬೇಳೆಬೇಯಿಸಿಕೊಳ್ಳುವುದರಲ್ಲಿ​ ನಿರತವಾಗಿವೆ​.​ ​ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದ್ದು, ಬಡವರ‌ ಮೇಲೆ ಬರೆ ಎಳೆಯುತ್ತಿವೆ​ ಎಂದು ಹೆಬ್ಬಾಳಕರ್ ಹೇಳಿದರು.
 
ಬಡವರ, ಶ್ರಮಿಕರ ಹಾಗೂ ರೈತರ ಬಗ್ಗೆ​  ಕಾಳಜಿ​ ಇಲ್ಲದ ಈ‌ ಸರ್ಕಾರಗ​ಳಿಗೆ ಜನರೇ ಉತ್ತರಿಸಲಿದ್ದಾರೆ​.​ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜೀವನ ಸಾಗಿಸಲಿಕ್ಕೆ ​ಜನರು ​ಹರ ಸಾಹಸ ​ಪ​ಡುತ್ತಿದ್ದಾರೆ​. ಮೊದಲು ಬೆಲೆ ನಿಯಂತ್ರಿಸಿ ನಿಮ್ಮ ಅಚ್ಛೇದಿನ್ ಶಪಥ ಪೂರೈಸಿ ಎಂದು ಅವರು ಬಿಜೆಪಿ ಸರಕಾರವನ್ನು ಆಗ್ರಹಿಸಿದರು. ​
ಭಾರತದಲ್ಲಿ ಸಾಮಾಜಿ​​ಕ ಸಮಾನತೆಗಾಗಿ ಹೋರಾಡಿದ ಅಗ್ರಗಣ್ಯ ನಾಯಕರಲ್ಲಿ ಡಾ|| ಬಿ ಆರ್ ಅಂಬೇಡ್ಕರ್ ಅವರ ಹೆಸರು ಚಿರಸ್ಥಾಯಿಯಾಗಿ ಉಳಿದಿದೆ, ಜೊತೆಗೆ ಭಾರತದ ಸಂವಿಧಾನ ರಚನೆಯಲ್ಲಿ ಗಣನೀಯ ಕೊಡುಗೆ ನೀಡಿದ ಅಂಬೇಡ್ಕರ್ ಅವರ ಆದರ್ಶಗಳ​ನ್ನು​ ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳುವ ​ಮೂಲಕ ಸತೀಶ್ ಜಾರಕಿಹೊಳಿ ಅವರನ್ನು ಲೋಕಸಭೆಗೆ ಪ್ರಚಂಡ ಬಹುಮತಗಳಿಂದ ಆರಿಸಿ ತರೋಣ​ ಎಂದು ಹೇಬ್ಬಾಳಕರ್ ವಿನಂತಿಸಿದರು​.

Spread the love

About Laxminews 24x7

Check Also

ಚುನಾವಣೆ ಚೆಕಿಂಗ್; ದಾಖಲೆ ಇಲ್ಲದ 20 ಲಕ್ಷಕ್ಕೂ ಅಧಿಕ ವಶ.!

Spread the love ಚಿತ್ರದುರ್ಗ; ಚಿತ್ರದುರ್ಗದಲ್ಲಿ ವಾಹನ ಒಂದರಲ್ಲಿ ವ್ಯಕ್ತಿಯೊಬ್ಬರು ದಾಖಲೆ ಇಲ್ಲದೆ ಸುಮಾರು 20 ಲಕ್ಷಕ್ಕೂ ಅಧಿಕ ಹಣವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ