Breaking News

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳಿ ಪಟವಾಗುತ್ತೆ : ಯಡಿಯೂರಪ್ಪ

Spread the love

ಬಸವಕಲ್ಯಾಣ : ಬಸವಕಲ್ಯಾಣದಲ್ಲೇ ಐತಿಹಾಸಿಕ ಅನುಭವ ಮಂಟಪ ನಿರ್ಮಾಣ ಕಾರ್ಯ ಆರಂಭಗೊಳಲ್ಲಿದೆ. ಮಾಜಿ ಸಚಿವ ಬಸವರಾಜ ಸೆಡಂ ಅವರಿಗೆ ಅನುಭವ ಮಂಟಪ ನಿರ್ಮಾಣದ ಜವಾಬ್ದಾರಿ ನೀಡಲಾಗಿದೆ ಎಂದು ಸೋಮವಾರ ಬಸವಕಲ್ಯಾಣದಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಇದೇ 17 ರಂದು ನಡೆಯಲಿರುವ ಉಪಚುನಾಣೆಯ ಪ್ರಚಾರಕ್ಕೆ ತೆರಳಿರುವ ಯಡಿಯೂರಪ್ಪ ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡರು. ಕಾಂಗ್ರೆಸ್ ಮೂರು ಕ್ಷೇತ್ರದಲ್ಲಿಯೂ ಗೆಲವು ಸಾಧಿಸುತ್ತದೆ ಎಂಬ ಮಲ್ಲಿಕಾರ್ಜುನ ಖರ್ಗೆ ಮಾತಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ, ಮಲ್ಲಿಕಾರ್ಜುನ ಖರ್ಗೆ ಅವರು ಹಿರಿಯರು, ಅವರ ಬಗ್ಗೆ ಗೌರವ ಇದೇ. ಈ ಚುನಾವಣೆಯಲ್ಲಿ ಬಿಜೆಪಿ 25 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳಿ ಪಟವಾಗುತ್ತೆ ಎಂದಿದ್ದಾರೆ.

ಇದೇ ವೇಳೆ ಬಸವಕಲ್ಯಾಣ ಅಭಿವೃದ್ಧಿ ಬಗ್ಗೆ ಮಾತನಾಡಿದ ಅವರು, ಅಂತರಾಷ್ಟ್ರೀಯ ಪ್ರವಾಸಿತಾಣವಾಗಿ ಬಸವಕಲ್ಯಾಣ ಬದಲಾಗುತ್ತೆ. ಬಸವಕಲ್ಯಾಣ ಸಂಪೂರ್ಣ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಈ ನಾಡಿನ ಅಭಿವೃದ್ಧಿಯೇ ನಮ್ಮ ಗುರಿ ಎಂದಿದ್ದಾರೆ.


Spread the love

About Laxminews 24x7

Check Also

ಜೈಲಿನಲ್ಲಿ ತಪಾಸಣೆಗೆ ಎಐ ಮಾದರಿ ತಂತ್ರಜ್ಞಾನ ಬಳಕೆ: ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್

Spread the loveಮಂಗಳೂರು: ಜೈಲಿನಲ್ಲಿ ತಪಾಸಣೆಗೆ ಟ್ರಯಲ್ ಬೇಸಿಸ್ ಮೇಲೆ ಎಐ ಟೆಕ್ನಾಲಜಿ ಬಳಕೆ ಮಾಡುತ್ತೇವೆ.‌ ಅದು ಎಷ್ಟು ಪರಿಣಾಮಕಾರಿ ಆಗುತ್ತದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ