Breaking News
Home / ರಾಜಕೀಯ / ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳಿ ಪಟವಾಗುತ್ತೆ : ಯಡಿಯೂರಪ್ಪ

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳಿ ಪಟವಾಗುತ್ತೆ : ಯಡಿಯೂರಪ್ಪ

Spread the love

ಬಸವಕಲ್ಯಾಣ : ಬಸವಕಲ್ಯಾಣದಲ್ಲೇ ಐತಿಹಾಸಿಕ ಅನುಭವ ಮಂಟಪ ನಿರ್ಮಾಣ ಕಾರ್ಯ ಆರಂಭಗೊಳಲ್ಲಿದೆ. ಮಾಜಿ ಸಚಿವ ಬಸವರಾಜ ಸೆಡಂ ಅವರಿಗೆ ಅನುಭವ ಮಂಟಪ ನಿರ್ಮಾಣದ ಜವಾಬ್ದಾರಿ ನೀಡಲಾಗಿದೆ ಎಂದು ಸೋಮವಾರ ಬಸವಕಲ್ಯಾಣದಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಇದೇ 17 ರಂದು ನಡೆಯಲಿರುವ ಉಪಚುನಾಣೆಯ ಪ್ರಚಾರಕ್ಕೆ ತೆರಳಿರುವ ಯಡಿಯೂರಪ್ಪ ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡರು. ಕಾಂಗ್ರೆಸ್ ಮೂರು ಕ್ಷೇತ್ರದಲ್ಲಿಯೂ ಗೆಲವು ಸಾಧಿಸುತ್ತದೆ ಎಂಬ ಮಲ್ಲಿಕಾರ್ಜುನ ಖರ್ಗೆ ಮಾತಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ, ಮಲ್ಲಿಕಾರ್ಜುನ ಖರ್ಗೆ ಅವರು ಹಿರಿಯರು, ಅವರ ಬಗ್ಗೆ ಗೌರವ ಇದೇ. ಈ ಚುನಾವಣೆಯಲ್ಲಿ ಬಿಜೆಪಿ 25 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳಿ ಪಟವಾಗುತ್ತೆ ಎಂದಿದ್ದಾರೆ.

ಇದೇ ವೇಳೆ ಬಸವಕಲ್ಯಾಣ ಅಭಿವೃದ್ಧಿ ಬಗ್ಗೆ ಮಾತನಾಡಿದ ಅವರು, ಅಂತರಾಷ್ಟ್ರೀಯ ಪ್ರವಾಸಿತಾಣವಾಗಿ ಬಸವಕಲ್ಯಾಣ ಬದಲಾಗುತ್ತೆ. ಬಸವಕಲ್ಯಾಣ ಸಂಪೂರ್ಣ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಈ ನಾಡಿನ ಅಭಿವೃದ್ಧಿಯೇ ನಮ್ಮ ಗುರಿ ಎಂದಿದ್ದಾರೆ.


Spread the love

About Laxminews 24x7

Check Also

ನೇಹಾ ಕೊಲೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ

Spread the loveಹುಬ್ಬಳ್ಳಿ : ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಫಯಾಝ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ