ರಾಯಚೂರು: ಮಸ್ಕಿ ಉಪ ಚುನಾವಣಾ ಸಮರ ದಿನೇ ದಿನೇ ರಂಗೇರುತ್ತಿದೆ. ಇದರ ಮಧ್ಯೆ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡಗೆ ಮತ ನೀಡುವಂತೆ ಬಿಜೆಪಿ ಮಾಜಿ ಶಾಸಕ ಎನ್.ಎಸ್. ನಂದೀಶ್ ಹಣ ಹಂಚಿಕೆ ಮಾಡಿದ್ದಾರೆ. ಹಣ ಹಂಚಿಕೆ ಮಾಡಿದವರ ಹಾಗೂ ಹಣ ಪಡೆದವರ ವಿರುದ್ಧ ಮಸ್ಕಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

ಬಿಜೆಪಿ ಕಾರ್ಯಕರ್ತ ಅಮಿತ್, ಚಿಟ್ಟಿಬಾಬು, ಹಣ ಪಡೆದ ವೃದ್ದೆ ತಾಯಮ್ಮ ಮೂವರನ್ನು ವಶಕ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಹಿಳೆಯರಿಗೆ ಹಾಗೂ ಮಕ್ಕಳಿಗೆ 1 ಸಾವಿರ ನೀಡುತ್ತಿರುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಪೊಲೀಸರು ವಿಡಿಯೋ ಆಧಾರಿಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಏಪ್ರಿಲ್ 10 ರಂದು ಹರ್ವಾಪುರದಲ್ಲಿ ಹಣ ಹಂಚಿದ ಆರೋಪದಡಿ ಕವಿತಾಳ ಪೊಲೀಸ್ ಠಾಣೆಯಲ್ಲಿ ಅನಾಮಧೇಯ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ.
Laxmi News 24×7