Breaking News

ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿಯಾಗುವ ಹುಚ್ಚು ಹಿಡಿದಿದೆ: ಈಶ್ವರಪ್ಪ

Spread the love

ಧಾರವಾಡ: ನೋಟು ಕೌಂಟಿಂಗ್ ಮಷಿನ್ ಇಟ್ಟುಕೊಳ್ಳುವದರಲ್ಲಿ ತಪ್ಪಿಲ್ಲ, ಒಬ್ಬ ಮಾಜಿ ಮುಖ್ಯಮಂತ್ರಿಯಾದವರು ಹುಚ್ಚರ ರೀತಿಯಲ್ಲಿ ಮಾತನಾಡುವುದು ಶೋಭೆ ತರಲ್ಲ ಎಂದು ಸಚಿವ ಕೆ.ಎಸ್ ಈಶ್ವರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, ವ್ಯಾಪಾರ ಮಾಡುವವರ ಮನೆಯಲ್ಲಿ ನೋಟು ಕೌಂಟಿಂಗ್ ಮಷಿನ್ ಇರುತ್ತದೆ. ಇದನ್ನು ಹೊರತು ನೋಟು ಪ್ರಿಂಟ್ ಮಷಿನ್ ಇಲ್ಲವಲ್ಲಾ ಎಂದರು. ಸಿದ್ದರಾಮಯ್ಯ ಭ್ರಷ್ಟಾಚಾರ ಮಾಡಿ ಬಂದವರು. ಹೀಗಾಗಿ ಏನೇನೂ ಮಾತನಾಡುತ್ತಾರೆ. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದಾರೆ. ಹೀಗಾಗಿ ಏನೇನೂ ಮಾತಡುತ್ತಿದ್ದು, ಅವರಿಗೆ ಮುಖ್ಯಮಂತ್ರಿಯಾಗುವ ಹುಚ್ಚು ಹಿಡಿದಿದೆ ಎಂದರು.

ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಗೆಲವು ಸಾಧಿಸುತ್ತೇವೆ ಎಂದ ಈಶ್ವರಪ್ಪ, ಅನುದಾನದ ಹಂಚಿಕೆ ಅಸಮಾಧಾನ ವಿಚಾರ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಎಲ್ಲವೂ ಸರಿಯಾಗುತ್ತದೆ. ಆ ವಿಷಯ ಮುಗಿದು ಹೋಗಿದೆ. ರಮೇಶ್ ಜಾರಕಿಹೊಳಿ ಹಾಗೂ ಬಾಲಚಂದ್ರ ಎರಡು ದಿನದಲ್ಲಿ ಪ್ರಚಾರಕ್ಕೆ ಬರುತ್ತಾರೆ. ಸಿ.ಡಿ ವಿಷಯದ ಬಗ್ಗೆ ಕೇಳಬೇಡಿ. ಸಿ.ಡಿ ವಿಷಯ ಅಸಹ್ಯ ಹುಟ್ಟಿಸುತ್ತದೆ. ಅದರ ಬಗ್ಗೆ ನಾನು ಎಲ್ಲಿಯೂ ಪ್ರತಿಕ್ರಿಯಿಸಿಲ್ಲ ಎಂದರು.


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ